<p>‘ನಾನು ಹತ್ತು ವರ್ಷದ ಹಿಂದೆ ಶಾಸಕನಾದಾಗ ತೃಪ್ತಿಯಿಂದ ಇದ್ದೆ. ಅಲ್ಲಿದ್ದಾಗ ಸಿದ್ದರಾಮಯ್ಯ ಅವರು ನನ್ನನ್ನು ಚೆನ್ನಾಗಿಯೇ ನೋಡಿಕೊಂಡಿದ್ದರು. ಆ ಪಕ್ಷ ಬಿಟ್ಟು ಬಂದ ಮೇಲೆ ತೃಪ್ತಿಯೇ ಇಲ್ಲದಾಗಿದೆ’ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಆರ್.ಮುನಿರತ್ನ ಹೇಳಿದರು.</p>.<p>ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರು ತಮ್ಮ ಕಷ್ಟ ಹೇಳಿಕೊಂಡರು.</p>.<p>‘2013ರಲ್ಲಿ ಮೊದಲ ಬಾರಿ ಕಾಂಗ್ರೆಸ್ನಿಂದ ಶಾಸಕನಾದಾಗ ಸಿದ್ದರಾಮಯ್ಯ ಅವರು ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿದ್ದರು. ಆ ಪಕ್ಷ ಬಿಟ್ಟು ಬಂದ ನಂತರ, ನನ್ನ ಮೇಲೆ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಅದು ಕಡಿಮೆಯಾಗುವಂತೆ ಕಾಣಿಸುತ್ತಿಲ್ಲ’ ಎಂದು ಹೇಳಿದರು.</p>.<p>‘ಕೆಲವರು ನನಗೆ ಅಪಘಾತ ಆಗಿ ಬಿಡುತ್ತದೆ. ಹೃದಯಾಘಾತವೂ ಆಗಿ ಬಿಡಬಹುದು ಎಂದು ಅಂದುಕೊಂಡಿದ್ದರು. ಕ್ಷೇತ್ರದ ಜನರ ಆಶೀರ್ವಾದ ಇರುವವರೆಗೂ ಏನೂ ಆಗುವುದಿಲ್ಲ’ ಎಂದರು.</p>.<p>ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಸಚಿವ ಶಿವರಾಜ ತಂಗಡಗಿ, ಗ್ಯಾರಂಟಿ ಸಮಿತಿಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರೊಂದಿಗೆ ಮುನಿರತ್ನ ಲವಲವಿಕೆಯಿಂದ ಇದ್ದರು. ಮುನಿರತ್ನ ಅವರು 2013, 2018ರಲ್ಲಿ ಕಾಂಗ್ರೆಸ್ನಿಂದ ಜಯಗಳಿಸಿದ್ದರು. 2019ರಲ್ಲಿ ಬಿಜೆಪಿ ಸೇರಿ ಆ ಪಕ್ಷದಿಂದ ಉಪಚುನಾವಣೆಯಲ್ಲಿ ಗೆದ್ದಿದ್ದರು. 2023ರಲ್ಲೂ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-4-1712439211</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ನಾನು ಹತ್ತು ವರ್ಷದ ಹಿಂದೆ ಶಾಸಕನಾದಾಗ ತೃಪ್ತಿಯಿಂದ ಇದ್ದೆ. ಅಲ್ಲಿದ್ದಾಗ ಸಿದ್ದರಾಮಯ್ಯ ಅವರು ನನ್ನನ್ನು ಚೆನ್ನಾಗಿಯೇ ನೋಡಿಕೊಂಡಿದ್ದರು. ಆ ಪಕ್ಷ ಬಿಟ್ಟು ಬಂದ ಮೇಲೆ ತೃಪ್ತಿಯೇ ಇಲ್ಲದಾಗಿದೆ’ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಆರ್.ಮುನಿರತ್ನ ಹೇಳಿದರು.</p>.<p>ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರು ತಮ್ಮ ಕಷ್ಟ ಹೇಳಿಕೊಂಡರು.</p>.<p>‘2013ರಲ್ಲಿ ಮೊದಲ ಬಾರಿ ಕಾಂಗ್ರೆಸ್ನಿಂದ ಶಾಸಕನಾದಾಗ ಸಿದ್ದರಾಮಯ್ಯ ಅವರು ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿದ್ದರು. ಆ ಪಕ್ಷ ಬಿಟ್ಟು ಬಂದ ನಂತರ, ನನ್ನ ಮೇಲೆ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಅದು ಕಡಿಮೆಯಾಗುವಂತೆ ಕಾಣಿಸುತ್ತಿಲ್ಲ’ ಎಂದು ಹೇಳಿದರು.</p>.<p>‘ಕೆಲವರು ನನಗೆ ಅಪಘಾತ ಆಗಿ ಬಿಡುತ್ತದೆ. ಹೃದಯಾಘಾತವೂ ಆಗಿ ಬಿಡಬಹುದು ಎಂದು ಅಂದುಕೊಂಡಿದ್ದರು. ಕ್ಷೇತ್ರದ ಜನರ ಆಶೀರ್ವಾದ ಇರುವವರೆಗೂ ಏನೂ ಆಗುವುದಿಲ್ಲ’ ಎಂದರು.</p>.<p>ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಸಚಿವ ಶಿವರಾಜ ತಂಗಡಗಿ, ಗ್ಯಾರಂಟಿ ಸಮಿತಿಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರೊಂದಿಗೆ ಮುನಿರತ್ನ ಲವಲವಿಕೆಯಿಂದ ಇದ್ದರು. ಮುನಿರತ್ನ ಅವರು 2013, 2018ರಲ್ಲಿ ಕಾಂಗ್ರೆಸ್ನಿಂದ ಜಯಗಳಿಸಿದ್ದರು. 2019ರಲ್ಲಿ ಬಿಜೆಪಿ ಸೇರಿ ಆ ಪಕ್ಷದಿಂದ ಉಪಚುನಾವಣೆಯಲ್ಲಿ ಗೆದ್ದಿದ್ದರು. 2023ರಲ್ಲೂ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-4-1712439211</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>