ವಿಚಾರಣೆ ವೇಳೆ ಸ್ವಾಮೀಜಿ ಪರ ಹಾಜರಿದ್ದ ಹಿರಿಯ ವಕೀಲ ರವಿ ಬಿ ನಾಯಕ್, ‘ಅರ್ಜಿದಾರರು ಸ್ವಾಮೀಜಿ ವಿರುದ್ಧ ಸುಳ್ಳು ಆರೋಪ ಹೊರಿಸಿದ್ದಾರೆ. ಆದ್ದರಿಂದ ತನಿಖಾಧಿಕಾರಿ ಸಂಗ್ರಹಿಸಿರುವ ದಾಖಲೆಗಳನ್ನು ನ್ಯಾಯಪೀಠಕ್ಕೆ ಹಾಜರುಪಡಿಸಲು ನಿರ್ದೇಶಿಸಬೇಕು. ಇಲ್ಲವಾದರೆ ಸ್ವಾಮೀಜಿಗೆ ಭರಿಸಲಾಗದ ನಷ್ಟವುಂಟಾಗುತ್ತದೆ’ ಎಂದು ವಿವರಿಸಿದರು.