ಶಿಕ್ಷಣವಿದ್ದರೆ ಮಾತ್ರ ಸ್ವಾಭಿಮಾನದ ಬದುಕು ಸಾಧ್ಯ. ಶಿಕ್ಷಣದ ಮೂಲಕ ವೈಚಾರಿಕತೆ ಬೆಳೆಸಿಕೊಳ್ಳಬೇಕು. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಬೇಕು. ಆಗ ಮಾತ್ರ ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ. ದೇವರ ಪೂಜೆ ಮಾಡುವುದು ತಪ್ಪಲ್ಲ. ಆದರೆ, ಮೌಢ್ಯ, ಕಂದಾಚಾರಗಳ ಪಾಲನೆ ತಪ್ಪು. ಉನ್ನತ ಶಿಕ್ಷಣ ಪಡೆದವರು, ವೈದ್ಯರು, ಎಂಜಿನಿಯರ್ಗಳೂ ಇಂದು ಮೌಢ್ಯ ಅನುಸರಿಸುತ್ತಿದ್ದಾರೆ. ಅಂಥವರು ಬಸವಾದಿ ಶರಣರ ಸಾಹಿತ್ಯ ಓದಬೇಕು ಎಂದು ಸಲಹೆ ನೀಡಿದರು.