'ಪ್ರಧಾನಿ ಮೋದಿ ಅವರಿಂದ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ. ಸಂವಿಧಾನಕ್ಕೆ ಅಪಮಾನವಾಗಿದೆ. ಕೋರ್ಟ್ ತೀರ್ಪಿನ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ನ್ಯಾಯಾಲಯದ ಆದೇಶ ಪ್ರತಿ ಸಿಕ್ಕುವ ಮುನ್ನವೇ ಅನರ್ಹಗೊಳಿಸಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಅಪಮಾನವಾಗಿದೆ. ವಯನಾಡಿನಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಭಾರತ್ ಜೋಡೊ ಯಾತ್ರೆಯಲ್ಲಿ ಲಭಿಸಿದ ಬೆಂಬಲದಿಂದ ಬಿಜೆಪಿ ಭಯಭೀತವಾಗಿದೆ' ಎಂದು ತಿಳಿಸಿದರು.