<p><strong>ಬೆಂಗಳೂರು</strong>: ಕರ್ನಾಟಕದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪ ಮಾಡಿರುವ ರಾಹುಲ್ ಗಾಂಧಿ, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಎನ್ನುವ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. </p><p>ಸಂವಿಧಾನ ಪುಸ್ತಕ ತೋರಿಸುತ್ತಾ ಭಾಷಣ ಆರಂಭಿಸಿದ ರಾಹುಲ್, ಬಿಜೆಪಿ ನಾಯಕರು ಪವಿತ್ರ ಗ್ರಂಥದ ಮೇಲೆ ಪ್ರಹಾರ ಮಾಡಿದ್ದಾರೆ, ಸಂವಿಧಾನವನ್ನು ಮುಗಿಸುವ ಹುನ್ನಾರ ಮಾಡಿದ್ದಾರೆ. ಸಮೀಕ್ಷೆಯ ಪ್ರಕಾರ ಕಳೆದ ಲೋಕಸಭಾ ಕ್ಷೇತ್ರದಲ್ಲಿ 16 ಕ್ಷೇತ್ರಗಳನ್ನು ನಾವು ಗೆಲ್ಲುತ್ತೇವೆ ಎನ್ನಲಾಗಿತ್ತು, ಆದರೆ ನಾವು ಗೆದ್ದಿದ್ದು 9 ಕ್ಷೇತ್ರಗಳಲ್ಲಿ ಮಾತ್ರ.</p><p>‘ಬೆಂಗಳೂರು ಕೇಂದ್ರದ ಮಹಾದೇವಪುರ ಕ್ಷೇತ್ರದ ಫಲಿತಾಂಶವನ್ನು ಸಮೀಕ್ಷೆ ಮಾಡಿದಾಗ ಚುನಾವಣಾ ಆಯೋಗ ಮತ್ತು ಬಿಜೆಪಿ ಒಟ್ಟಾಗಿ ಚುನಾವಣೆಯಲ್ಲಿ ಮೋಸ ಮಾಡಿದೆ. ಆರು ಮತಗಳಲ್ಲಿ ಒಂದು ಮತ ಕಳ್ಳತನ ಮಾಡಿದ್ದಾರೆ. ಭಾವಚಿತ್ರವಿಲ್ಲದ 4 ಸಾವಿರ ಪ್ರಕರಣಗಳು ದೊರೆತಿವೆ. ಒಬ್ಬನೇ ಮತದಾರನಿಂದ ಹಲವು ರಾಜ್ಯಗಳಲ್ಲಿ ಮತದಾನವಾಗಿದೆ’ ಎಂದು ಆರೋಪಿಸಿದ್ದಾರೆ.</p><p>‘ಈ ಕಳ್ಳತನ ಕರ್ನಾಟಕದಲ್ಲಿ ಮಾತ್ರವಲ್ಲ ದೇಶದಾದ್ಯಂತ ನಡೆದಿದೆ. ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ. ಒಂದು ಕ್ಷೇತ್ರದಲ್ಲಿ ನಡೆದ ಕಳ್ಳತನದ ಬಗ್ಗೆ ಪರಿಶೀಲನೆ ಮಾಡಿದ್ದೇವೆ, ರಾಜ್ಯದಲ್ಲಿ ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎನ್ನುವುದನ್ನು ಸಾಬೀತು ಮಾಡಬಲ್ಲೆವು.</p><p>‘ನರೇಂದ್ರ ಮೋದಿ ಪ್ರಧಾನಿ 25 ಸೀಟುಗಳಿಂದ ಪ್ರಧಾನ ಮಂತ್ರಿಯಾಗಿದ್ದಾರೆ. ಸದ್ಯ ಒಂದು ಸೀಟಿನಲ್ಲಿ ಕಳ್ಳತನವಾಗಿದೆ ಎನ್ನುವುದನ್ನು ಸಾಬೀತು ಮಾಡಿದ್ದೇವೆ. ಎಲೆಕ್ಟ್ರಾನಿಕ್ ಮತಯಂತ್ರದ ಅಂಕಿ ಅಂಶ ಸಿಕ್ಕರೆ ಮೋದಿಯರವು ಮೋಸದಿಂದ ಪ್ರಧಾನಿಯಾದ ಬಗ್ಗೆ ಸಾಕ್ಷಿ ಸಮೇತ ತೋರಿಸುತ್ತೇವೆ’ ಎಂದು ಗುಡುಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪ ಮಾಡಿರುವ ರಾಹುಲ್ ಗಾಂಧಿ, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಎನ್ನುವ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. </p><p>ಸಂವಿಧಾನ ಪುಸ್ತಕ ತೋರಿಸುತ್ತಾ ಭಾಷಣ ಆರಂಭಿಸಿದ ರಾಹುಲ್, ಬಿಜೆಪಿ ನಾಯಕರು ಪವಿತ್ರ ಗ್ರಂಥದ ಮೇಲೆ ಪ್ರಹಾರ ಮಾಡಿದ್ದಾರೆ, ಸಂವಿಧಾನವನ್ನು ಮುಗಿಸುವ ಹುನ್ನಾರ ಮಾಡಿದ್ದಾರೆ. ಸಮೀಕ್ಷೆಯ ಪ್ರಕಾರ ಕಳೆದ ಲೋಕಸಭಾ ಕ್ಷೇತ್ರದಲ್ಲಿ 16 ಕ್ಷೇತ್ರಗಳನ್ನು ನಾವು ಗೆಲ್ಲುತ್ತೇವೆ ಎನ್ನಲಾಗಿತ್ತು, ಆದರೆ ನಾವು ಗೆದ್ದಿದ್ದು 9 ಕ್ಷೇತ್ರಗಳಲ್ಲಿ ಮಾತ್ರ.</p><p>‘ಬೆಂಗಳೂರು ಕೇಂದ್ರದ ಮಹಾದೇವಪುರ ಕ್ಷೇತ್ರದ ಫಲಿತಾಂಶವನ್ನು ಸಮೀಕ್ಷೆ ಮಾಡಿದಾಗ ಚುನಾವಣಾ ಆಯೋಗ ಮತ್ತು ಬಿಜೆಪಿ ಒಟ್ಟಾಗಿ ಚುನಾವಣೆಯಲ್ಲಿ ಮೋಸ ಮಾಡಿದೆ. ಆರು ಮತಗಳಲ್ಲಿ ಒಂದು ಮತ ಕಳ್ಳತನ ಮಾಡಿದ್ದಾರೆ. ಭಾವಚಿತ್ರವಿಲ್ಲದ 4 ಸಾವಿರ ಪ್ರಕರಣಗಳು ದೊರೆತಿವೆ. ಒಬ್ಬನೇ ಮತದಾರನಿಂದ ಹಲವು ರಾಜ್ಯಗಳಲ್ಲಿ ಮತದಾನವಾಗಿದೆ’ ಎಂದು ಆರೋಪಿಸಿದ್ದಾರೆ.</p><p>‘ಈ ಕಳ್ಳತನ ಕರ್ನಾಟಕದಲ್ಲಿ ಮಾತ್ರವಲ್ಲ ದೇಶದಾದ್ಯಂತ ನಡೆದಿದೆ. ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ. ಒಂದು ಕ್ಷೇತ್ರದಲ್ಲಿ ನಡೆದ ಕಳ್ಳತನದ ಬಗ್ಗೆ ಪರಿಶೀಲನೆ ಮಾಡಿದ್ದೇವೆ, ರಾಜ್ಯದಲ್ಲಿ ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎನ್ನುವುದನ್ನು ಸಾಬೀತು ಮಾಡಬಲ್ಲೆವು.</p><p>‘ನರೇಂದ್ರ ಮೋದಿ ಪ್ರಧಾನಿ 25 ಸೀಟುಗಳಿಂದ ಪ್ರಧಾನ ಮಂತ್ರಿಯಾಗಿದ್ದಾರೆ. ಸದ್ಯ ಒಂದು ಸೀಟಿನಲ್ಲಿ ಕಳ್ಳತನವಾಗಿದೆ ಎನ್ನುವುದನ್ನು ಸಾಬೀತು ಮಾಡಿದ್ದೇವೆ. ಎಲೆಕ್ಟ್ರಾನಿಕ್ ಮತಯಂತ್ರದ ಅಂಕಿ ಅಂಶ ಸಿಕ್ಕರೆ ಮೋದಿಯರವು ಮೋಸದಿಂದ ಪ್ರಧಾನಿಯಾದ ಬಗ್ಗೆ ಸಾಕ್ಷಿ ಸಮೇತ ತೋರಿಸುತ್ತೇವೆ’ ಎಂದು ಗುಡುಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>