ಮಂಗಳವಾರದ ಪಾದಯಾತ್ರೆ ಆರಂಭವಾಗುವುದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಮುಲಾಯಂ ಸಿಂಗ್ ಯಾದವ್ ದೊಡ್ಡ ಹೋರಾಟಗಾರ. ಸಮಾಜವಾದಿ ಪಕ್ಷ ಕಟ್ಟಿ ದೇಶದ ಅಭಿವೃದ್ದಿಗೆ ಶ್ರಮಿಸಿದ್ದಾರೆ. ಅವರ ಅಂತ್ಯಕ್ರಿಯೆಯಲ್ಲಿ ರಾಹುಲ್ ಪಾಲ್ಗೊಳ್ಳಬೇಕು ಎಂಬ ಒತ್ತಡವಿತ್ತು. ಈ ಕುರಿತು ರಾತ್ರಿ ಬಹು ಹೊತ್ತು ಚರ್ಚಿಸಲಾಯಿತು. ರಾಹುಲ್ ಇಲ್ಲದೇ ಯಾತ್ರೆ ನಡೆಸುವುದು ಸರಿಯಾಗುವುದಿಲ್ಲ ಎಂದು ಭಾವಿಸಿ ಇಲ್ಲಿಂದಲೇ ಗೌರವ ಸಲ್ಲಿಸುತ್ತಾ ಯಾತ್ರೆ ಮುಂದುವರೆಸಲು ತೀರ್ಮಾನಿಸಲಾಗಿದೆ' ಎಂದು ಮಾಹಿತಿ ನೀಡಿದರು.