<p><strong>ನವದೆಹಲಿ</strong>: ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಯ ವಿಳಂಬಕ್ಕೆ ರಾಜ್ಯ ಸರ್ಕಾರವನ್ನು ದೂಷಿಸಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ‘ರಾಜ್ಯ ಸರ್ಕಾರದಿಂದ ಭೂಮಿ ಹಸ್ತಾಂತರ ವಿಳಂಬವಾಗಿದೆ. ಜತೆಗೆ, ಕೆ–ರೈಡ್ಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರನ್ನೂ ನೇಮಿಸಿಲ್ಲ’ ಎಂದು ಕಿಡಿಕಾರಿದರು. </p>.<p>ಲೋಕಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪ್ರಶ್ನೆಗೆ ಉತ್ತರ ನೀಡಿರುವ ಅವರು, ‘ರೈಲ್ವೆ ಇಲಾಖೆಯು ಕೆ–ರೈಡ್ಗೆ ಭೂಮಿ ಹಸ್ತಾಂತರ ಮಾಡಿದೆ. ಆದರೆ, ರಾಜ್ಯ ಸರ್ಕಾರದಿಂದ ಭೂಮಿ ಹಸ್ತಾಂತರ ಭಾರಿ ವಿಳಂಬವಾಗಿದೆ’ ಎಂದರು. </p>.<p>‘ಪ್ರಸ್ತುತ ಕೆ-ರೈಡ್ನಲ್ಲಿ ಕರ್ನಾಟಕ ಸರ್ಕಾರದಿಂದ ನೇಮಿಸಲ್ಪಟ್ಟ ಅರೆಕಾಲಿಕ ವ್ಯವಸ್ಥಾಪಕ ನಿರ್ದೇಶಕರು ಯೋಜನೆಯ ಕೆಲಸವನ್ನು ನೋಡಿಕೊಳ್ಳುತ್ತಿದ್ದಾರೆ. ರೈಲ್ವೆ ತಂತ್ರಜ್ಞಾನದ ಬಗ್ಗೆ ಪರಿಣತಿ ಹೊಂದಿರುವ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸುವ ಅವಶ್ಯಕತೆ ಇದೆ’ ಎಂದು ಅವರು ಪ್ರತಿಪಾದಿಸಿದರು. </p>.<p>‘ಬೈಯಪ್ಪನಹಳ್ಳಿ ಮತ್ತು ಚಿಕ್ಕಬಾಣಾವರ ನಡುವಿನ ಕಾರಿಡಾರ್ನ 25.01 ಕಿ.ಮೀ ಮತ್ತು ಹೀಲಳಿಗೆ-ರಾಜಾನುಕುಂಟೆ ನಡುವಿನ ಕಾರಿಡಾರ್ನ 46.25 ಕಿ.ಮೀ. ಕೆಲಸ ಪ್ರಗತಿಯಲ್ಲಿದೆ. ಕೆಎಸ್ಆರ್– ದೇವನಹಳ್ಳಿ ನಡುವಿನ ಕಾರಿಡಾರ್ನ 41.4 ಕಿ.ಮೀ. ಮತ್ತು ಕೆಂಗೇರಿ–ವೈಟ್ಫೀಲ್ಡ್ ನಡುವಿನ ಕಾರಿಡಾರ್ನ 35.52 ಕಿ.ಮೀ ಕಾಮಗಾರಿಗಾಗಿ ಪ್ರಾಥಮಿಕ ಕೆಲಸಗಳು ಪ್ರಾರಂಭವಾಗಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬೆಂಗಳೂರು ಉಪನಗರ ರೈಲು ಯೋಜನೆ ಕಾಮಗಾರಿಯ ವಿಳಂಬಕ್ಕೆ ರಾಜ್ಯ ಸರ್ಕಾರವನ್ನು ದೂಷಿಸಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ‘ರಾಜ್ಯ ಸರ್ಕಾರದಿಂದ ಭೂಮಿ ಹಸ್ತಾಂತರ ವಿಳಂಬವಾಗಿದೆ. ಜತೆಗೆ, ಕೆ–ರೈಡ್ಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರನ್ನೂ ನೇಮಿಸಿಲ್ಲ’ ಎಂದು ಕಿಡಿಕಾರಿದರು. </p>.<p>ಲೋಕಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪ್ರಶ್ನೆಗೆ ಉತ್ತರ ನೀಡಿರುವ ಅವರು, ‘ರೈಲ್ವೆ ಇಲಾಖೆಯು ಕೆ–ರೈಡ್ಗೆ ಭೂಮಿ ಹಸ್ತಾಂತರ ಮಾಡಿದೆ. ಆದರೆ, ರಾಜ್ಯ ಸರ್ಕಾರದಿಂದ ಭೂಮಿ ಹಸ್ತಾಂತರ ಭಾರಿ ವಿಳಂಬವಾಗಿದೆ’ ಎಂದರು. </p>.<p>‘ಪ್ರಸ್ತುತ ಕೆ-ರೈಡ್ನಲ್ಲಿ ಕರ್ನಾಟಕ ಸರ್ಕಾರದಿಂದ ನೇಮಿಸಲ್ಪಟ್ಟ ಅರೆಕಾಲಿಕ ವ್ಯವಸ್ಥಾಪಕ ನಿರ್ದೇಶಕರು ಯೋಜನೆಯ ಕೆಲಸವನ್ನು ನೋಡಿಕೊಳ್ಳುತ್ತಿದ್ದಾರೆ. ರೈಲ್ವೆ ತಂತ್ರಜ್ಞಾನದ ಬಗ್ಗೆ ಪರಿಣತಿ ಹೊಂದಿರುವ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸುವ ಅವಶ್ಯಕತೆ ಇದೆ’ ಎಂದು ಅವರು ಪ್ರತಿಪಾದಿಸಿದರು. </p>.<p>‘ಬೈಯಪ್ಪನಹಳ್ಳಿ ಮತ್ತು ಚಿಕ್ಕಬಾಣಾವರ ನಡುವಿನ ಕಾರಿಡಾರ್ನ 25.01 ಕಿ.ಮೀ ಮತ್ತು ಹೀಲಳಿಗೆ-ರಾಜಾನುಕುಂಟೆ ನಡುವಿನ ಕಾರಿಡಾರ್ನ 46.25 ಕಿ.ಮೀ. ಕೆಲಸ ಪ್ರಗತಿಯಲ್ಲಿದೆ. ಕೆಎಸ್ಆರ್– ದೇವನಹಳ್ಳಿ ನಡುವಿನ ಕಾರಿಡಾರ್ನ 41.4 ಕಿ.ಮೀ. ಮತ್ತು ಕೆಂಗೇರಿ–ವೈಟ್ಫೀಲ್ಡ್ ನಡುವಿನ ಕಾರಿಡಾರ್ನ 35.52 ಕಿ.ಮೀ ಕಾಮಗಾರಿಗಾಗಿ ಪ್ರಾಥಮಿಕ ಕೆಲಸಗಳು ಪ್ರಾರಂಭವಾಗಿವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>