<p><strong>ನವದೆಹಲಿ</strong>: ಈ ಸಲದ ಕೇಂದ್ರ ಬಜೆಟ್ನಲ್ಲಿ ಕರ್ನಾಟಕದಲ್ಲಿ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ₹3,085 ಕೋಟಿ ಹಾಗೂ ಜೋಡಿ ಹಳಿಗಳ ನಿರ್ಮಾಣಕ್ಕೆ ₹1,534 ಕೋಟಿ ಮೀಸಲಿಡಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. </p>.<p>ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್ಒಬಿ, ಆರ್ಯುಬಿ ನಿರ್ಮಾಣಕ್ಕೆ ಸಂಪೂರ್ಣ ಮೊತ್ತವನ್ನು ರೈಲ್ವೆ ಇಲಾಖೆಯೇ ಭರಿಸುತ್ತದೆ. ರಾಜ್ಯದಲ್ಲಿ ₹52,900 ಕೋಟಿ ಮೊತ್ತದ ರೈಲ್ವೆ ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದರು. </p>.<p>‘ಅಮೃತ ಯೋಜನೆಯಡಿ ₹2,110 ಕೋಟಿ ವೆಚ್ಚದಲ್ಲಿ ರಾಜ್ಯದ 61 ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಒಂಬತ್ತು ನಿಲ್ದಾಣಗಳ ಕಾಮಗಾರಿ ಮುಗಿದಿದೆ’ ಎಂದು ಅವರು ಮಾಹಿತಿ ನೀಡಿದರು. </p>.<p>‘ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ. ಅವರು ತಮ್ಮ ಕಣ್ಣಿನ ಪೊರೆ ತೆಗೆಸಿಕೊಳ್ಳಬೇಕು. ಸಣ್ಣತನದ ರಾಜಕೀಯ, ಸ್ಯಾಡಿಸ್ಟ್ ಬುದ್ಧಿ ಬಿಟ್ಟು ಕೆಲಸ ಮಾಡಬೇಕು. ಕೇಂದ್ರದ ಜತೆಗೂಡಿ ರಾಜ್ಯ ಸರ್ಕಾರ ಕೆಲಸ ಮಾಡಬೇಕು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಈ ಸಲದ ಕೇಂದ್ರ ಬಜೆಟ್ನಲ್ಲಿ ಕರ್ನಾಟಕದಲ್ಲಿ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ₹3,085 ಕೋಟಿ ಹಾಗೂ ಜೋಡಿ ಹಳಿಗಳ ನಿರ್ಮಾಣಕ್ಕೆ ₹1,534 ಕೋಟಿ ಮೀಸಲಿಡಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. </p>.<p>ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರ್ಒಬಿ, ಆರ್ಯುಬಿ ನಿರ್ಮಾಣಕ್ಕೆ ಸಂಪೂರ್ಣ ಮೊತ್ತವನ್ನು ರೈಲ್ವೆ ಇಲಾಖೆಯೇ ಭರಿಸುತ್ತದೆ. ರಾಜ್ಯದಲ್ಲಿ ₹52,900 ಕೋಟಿ ಮೊತ್ತದ ರೈಲ್ವೆ ಕಾಮಗಾರಿಗಳು ಪ್ರಗತಿಯಲ್ಲಿವೆ’ ಎಂದರು. </p>.<p>‘ಅಮೃತ ಯೋಜನೆಯಡಿ ₹2,110 ಕೋಟಿ ವೆಚ್ಚದಲ್ಲಿ ರಾಜ್ಯದ 61 ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಒಂಬತ್ತು ನಿಲ್ದಾಣಗಳ ಕಾಮಗಾರಿ ಮುಗಿದಿದೆ’ ಎಂದು ಅವರು ಮಾಹಿತಿ ನೀಡಿದರು. </p>.<p>‘ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ. ಅವರು ತಮ್ಮ ಕಣ್ಣಿನ ಪೊರೆ ತೆಗೆಸಿಕೊಳ್ಳಬೇಕು. ಸಣ್ಣತನದ ರಾಜಕೀಯ, ಸ್ಯಾಡಿಸ್ಟ್ ಬುದ್ಧಿ ಬಿಟ್ಟು ಕೆಲಸ ಮಾಡಬೇಕು. ಕೇಂದ್ರದ ಜತೆಗೂಡಿ ರಾಜ್ಯ ಸರ್ಕಾರ ಕೆಲಸ ಮಾಡಬೇಕು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>