ಬೆಳಿಗ್ಗೆ 5 ಗಂಟೆಗೆ ಕೊಯಮತ್ತೂರಿನಿಂದ ಹೊರಟ ರೈಲು ಬೆಳಿಗ್ಗೆ 10.38ಕ್ಕೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಕ್ಕೆ ತಲುಪಿತು.
ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್ ನಿಲ್ದಾಣಕ್ಕೆ ಭೇಟಿ ನೀಡಿ ರೈಲಿನ ಪರಿಶೀಲನೆ ನಡೆಸಿದರು. ರೈಲಿನ ವೇಳಾಪಟ್ಟಿ ಹಾಗೂ ಟಿಕೆಟ್ ದರದ ಬಗ್ಗೆ ಶೀಘ್ರವೇ ತಿಳಿಸಲಾಗುವುದು ಎಂದು ನೈಋತ್ಯ ರೈಲ್ವೆ ಹೇಳಿದೆ.
ನೂತನ ರೈಲುಗಳ ವೇಳಾಪಟ್ಟಿಯನ್ನು ಶೀಘ್ರದಲ್ಲಿ ಘೋಷಿಸಲಾಗುವುದು. ಈ ಎರಡು ಹೊಸ ರೈಲುಗಳ ಸೇರ್ಪಡೆಯಿಂದ ಕರ್ನಾಟಕಕ್ಕೆ ಸಿಕ್ಕ ಒಟ್ಟು ವಂದೇ ಭಾರತ್ ರೈಲುಗಳ ಸಂಖ್ಯೆ 5ಕ್ಕೆ ಏರಿಕೆಯಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.