<p><strong>ಕಲಬುರಗಿ:</strong> ‘ಸಾಮಾನ್ಯ ಪ್ರಯಾಣಿಕರ ಅಗತ್ಯಗಳನ್ನು ಪೂರೈಸಲು ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಭಾರತೀಯ ರೈಲ್ವೆಯು ಶೀಘ್ರವೇ 10 ಸಾವಿರ ಜನರಲ್ ಬೋಗಿಗಳನ್ನು ಪ್ರಯಾಣಿಕರ ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇಲ್ವರ್ಗದವರ ಅನುಕೂಲಕ್ಕಾಗಿ ಎ.ಸಿ. ಬೋಗಿಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದನ್ನು ಹೋಗಲಾಡಿಸಲು 10 ಸಾವಿರ ಹೊಸ ಜನರಲ್ ಬೋಗಿಗಳು ಸಿದ್ಧವಾಗಿವೆ. ಹಂತ–ಹಂತವಾಗಿ ಹಳೇ ಬೋಗಿಗಳನ್ನು ತೆಗೆದು ಹೊಸ ಬೋಗಿಗಳನ್ನು ಅಳವಡಿಸಲಾಗುವುದು’ ಎಂದು ಹೇಳಿದರು. </p>.<p>‘ರಾಜ್ಯದಲ್ಲಿ 13 ಜಿಲ್ಲೆಗಳಲ್ಲಿ ವಂದೇ ಭಾರತ್ ರೈಲುಗಳು ಓಡುತ್ತಿವೆ. ಮಂಗಳೂರು–ಬೆಂಗಳೂರು, ಬೆಳಗಾವಿ– ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಿಸುವಂತೆ ಬೇಡಿಕೆ ಬರುತ್ತಿದ್ದು, ಶೀಘ್ರವೇ ಆ ರೈಲುಗಳಿಗೆ ಚಾಲನೆ ನೀಡಲಾಗುವುದು’ ಎಂದು ಹೇಳಿದರು.</p>.<p>‘ವಿದ್ಯುದ್ದೀಕರಣದಿಂದ ರೈಲ್ವೆಗೆ ಪ್ರತಿ ವರ್ಷ ಸುಮಾರು ₹ 18 ಸಾವಿರ ಕೋಟಿ ಉಳಿತಾಯ ಆಗುತ್ತಿದೆ. ಹೀಗಾಗಿ, ಪ್ರತಿಯೊಂದು ಹೊಸ ರೈಲು ಹಳಿಯನ್ನು ವಿದ್ಯುದ್ದೀಕರಣದ ಮೂಲಕ ಆರಂಭಿಸುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಸಾಮಾನ್ಯ ಪ್ರಯಾಣಿಕರ ಅಗತ್ಯಗಳನ್ನು ಪೂರೈಸಲು ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಭಾರತೀಯ ರೈಲ್ವೆಯು ಶೀಘ್ರವೇ 10 ಸಾವಿರ ಜನರಲ್ ಬೋಗಿಗಳನ್ನು ಪ್ರಯಾಣಿಕರ ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೇಲ್ವರ್ಗದವರ ಅನುಕೂಲಕ್ಕಾಗಿ ಎ.ಸಿ. ಬೋಗಿಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದನ್ನು ಹೋಗಲಾಡಿಸಲು 10 ಸಾವಿರ ಹೊಸ ಜನರಲ್ ಬೋಗಿಗಳು ಸಿದ್ಧವಾಗಿವೆ. ಹಂತ–ಹಂತವಾಗಿ ಹಳೇ ಬೋಗಿಗಳನ್ನು ತೆಗೆದು ಹೊಸ ಬೋಗಿಗಳನ್ನು ಅಳವಡಿಸಲಾಗುವುದು’ ಎಂದು ಹೇಳಿದರು. </p>.<p>‘ರಾಜ್ಯದಲ್ಲಿ 13 ಜಿಲ್ಲೆಗಳಲ್ಲಿ ವಂದೇ ಭಾರತ್ ರೈಲುಗಳು ಓಡುತ್ತಿವೆ. ಮಂಗಳೂರು–ಬೆಂಗಳೂರು, ಬೆಳಗಾವಿ– ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಿಸುವಂತೆ ಬೇಡಿಕೆ ಬರುತ್ತಿದ್ದು, ಶೀಘ್ರವೇ ಆ ರೈಲುಗಳಿಗೆ ಚಾಲನೆ ನೀಡಲಾಗುವುದು’ ಎಂದು ಹೇಳಿದರು.</p>.<p>‘ವಿದ್ಯುದ್ದೀಕರಣದಿಂದ ರೈಲ್ವೆಗೆ ಪ್ರತಿ ವರ್ಷ ಸುಮಾರು ₹ 18 ಸಾವಿರ ಕೋಟಿ ಉಳಿತಾಯ ಆಗುತ್ತಿದೆ. ಹೀಗಾಗಿ, ಪ್ರತಿಯೊಂದು ಹೊಸ ರೈಲು ಹಳಿಯನ್ನು ವಿದ್ಯುದ್ದೀಕರಣದ ಮೂಲಕ ಆರಂಭಿಸುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>