<p><strong>ಕುಷ್ಟಗಿ (ಕೊಪ್ಪಳ ಜಿಲ್ಲೆ):</strong> ‘ರಾಜ್ಯದಲ್ಲಿ ಆಗಬೇಕಾದ ರೈಲ್ವೆ ಸಂಬಂಧಿತ ಕಾಮಗಾರಿಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರ ನೀಡಬೇಕಾದ ₹837 ಕೋಟಿ ಬಾಕಿ ಉಳಿದಿದ್ದು, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರಡ್ಡಿ ತ್ವರಿತವಾಗಿ ಈ ಹಣ ಕೊಡಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಆಗ್ರಹಿಸಿದರು.</p><p>ಪಟ್ಟಣದಲ್ಲಿ ಗುರುವಾರ ಕುಷ್ಟಗಿ–ತಳಕಲ್ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿ ’ಅನೇಕ ವರ್ಷಗಳಿಂದ ನೆನಗುದಿಗೆ ಬಿದ್ದ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರ ₹7 ಲಕ್ಷ ಕೋಟಿ ಖರ್ಚು ಮಾಡುತ್ತಿದೆ. ಈ ವರ್ಷದ ಅಂತ್ಯದಲ್ಲಿ ದೇಶದ ಎಲ್ಲ ರೈಲು ಮಾರ್ಗಗಳನ್ನು ವಿದ್ಯುದ್ವೀಕರಣ ಮಾಡಲಾಗುವುದು’ ಎಂದು ತಿಳಿಸಿದರು.</p><p>‘ಪ್ರಸ್ತುತ ದೇಶದಲ್ಲಿ 1,400 ನಿಲ್ದಾಣಗಳನ್ನು ₹20 ಸಾವಿರ ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದ್ದು, ಇದರಲ್ಲಿ ರಾಜ್ಯದ 61 ನಿಲ್ದಾಣಗಳು ಕೂಡ ಸೇರಿವೆ. ಆಲಮಟ್ಟಿಯಿಂದ–ಯಾದಗಿರಿ ತನಕದ 162 ಕಿ.ಮೀ. ಮಾರ್ಗದ ಅಂತಿಮ ಸ್ಥಳ ಸಮೀಕ್ಷೆ ಮಾಡಲು ₹4.05 ಕೋಟಿ, ಭದ್ರಾವತಿಯಿಂದ ಚನ್ನಗಿರಿ ಮಾರ್ಗವಾಗಿ ಚಿಕ್ಕಜಾಜೂರು ತನಕ 73 ಕಿ.ಮೀ. ಸರ್ವೆ ಮಾಡಲು ರೈಲ್ವೆ ಮಂಡಳಿಯ ಅನುಮತಿ ಲಭಿಸಿದೆ. ಈ ಕಾಮಗಾರಿಗೆ ₹5,875 ಕೋಟಿ ಅಂದಾಜಿಸಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ (ಕೊಪ್ಪಳ ಜಿಲ್ಲೆ):</strong> ‘ರಾಜ್ಯದಲ್ಲಿ ಆಗಬೇಕಾದ ರೈಲ್ವೆ ಸಂಬಂಧಿತ ಕಾಮಗಾರಿಗಳನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರ ನೀಡಬೇಕಾದ ₹837 ಕೋಟಿ ಬಾಕಿ ಉಳಿದಿದ್ದು, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರಡ್ಡಿ ತ್ವರಿತವಾಗಿ ಈ ಹಣ ಕೊಡಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಆಗ್ರಹಿಸಿದರು.</p><p>ಪಟ್ಟಣದಲ್ಲಿ ಗುರುವಾರ ಕುಷ್ಟಗಿ–ತಳಕಲ್ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿ ’ಅನೇಕ ವರ್ಷಗಳಿಂದ ನೆನಗುದಿಗೆ ಬಿದ್ದ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರ ₹7 ಲಕ್ಷ ಕೋಟಿ ಖರ್ಚು ಮಾಡುತ್ತಿದೆ. ಈ ವರ್ಷದ ಅಂತ್ಯದಲ್ಲಿ ದೇಶದ ಎಲ್ಲ ರೈಲು ಮಾರ್ಗಗಳನ್ನು ವಿದ್ಯುದ್ವೀಕರಣ ಮಾಡಲಾಗುವುದು’ ಎಂದು ತಿಳಿಸಿದರು.</p><p>‘ಪ್ರಸ್ತುತ ದೇಶದಲ್ಲಿ 1,400 ನಿಲ್ದಾಣಗಳನ್ನು ₹20 ಸಾವಿರ ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದ್ದು, ಇದರಲ್ಲಿ ರಾಜ್ಯದ 61 ನಿಲ್ದಾಣಗಳು ಕೂಡ ಸೇರಿವೆ. ಆಲಮಟ್ಟಿಯಿಂದ–ಯಾದಗಿರಿ ತನಕದ 162 ಕಿ.ಮೀ. ಮಾರ್ಗದ ಅಂತಿಮ ಸ್ಥಳ ಸಮೀಕ್ಷೆ ಮಾಡಲು ₹4.05 ಕೋಟಿ, ಭದ್ರಾವತಿಯಿಂದ ಚನ್ನಗಿರಿ ಮಾರ್ಗವಾಗಿ ಚಿಕ್ಕಜಾಜೂರು ತನಕ 73 ಕಿ.ಮೀ. ಸರ್ವೆ ಮಾಡಲು ರೈಲ್ವೆ ಮಂಡಳಿಯ ಅನುಮತಿ ಲಭಿಸಿದೆ. ಈ ಕಾಮಗಾರಿಗೆ ₹5,875 ಕೋಟಿ ಅಂದಾಜಿಸಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>