ಕಾವೇರಿ ನದಿಯ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ನೆಲ್ಯಹುದಿಕೇರಿ ವ್ಯಾಪ್ತಿಯ ಬೆಟ್ಟದಕಾಡು, ಕುಂಬಾರಗುಂಡಿ ಹಾಗೂ ಬರಡಿ ವ್ಯಾಪ್ತಿಯ ನದಿ ದಡದ ನಿವಾಸಿಗಳಿಗೆ ಮುಂಜಾಗೃತಾ ಕ್ರಮವಾಗಿ ಕಂದಾಯ ಇಲಾಖೆ ನೋಟೀಸ್ ಜಾರಿ ಮಾಡಿದೆ. ನದಿಯ ನೀರು ಹೆಚ್ಚಾಗುತ್ತಿದ್ದು, ಅಪಾಯ ಎದುರಾಗುವ ಸಾಧ್ಯತೆ ಇರುವುದರಿಂದ ನಿವಾಸಿಗಳು ಮುಂಜಾಗ್ರತೆಯಿಂದ ಇರಬೇಕೆಂದು ಕುಶಾಲನಗರ ಹೋಬಳಿ ಕಂದಾಯ ಪರಿವೀಕ್ಷಕ ಕೆ.ಜೆ ಮಧುಸೂಧನ್, ಗ್ರಾಮ ಲೆಕ್ಕಿಗ ಅನುಷಾ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.