<p><strong>ಮೈಸೂರು</strong>: ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಯ ಹಲವೆಡೆ ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದೆ.</p>.<p>ಮಂಡ್ಯ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾಲಹಳ್ಳಿ ಕೊಳೆಗೇರಿಯ ಮನೆಗಳಿಗೆ ನೀರು ನುಗ್ಗಿದೆ. ಮನೆಗಳಲ್ಲಿದ್ದ ವಸ್ತುಗಳು ಹಾಳಾಗಿವೆ. ತಾಲ್ಲೂಕಿನ ಕೆರಗೋಡು, ಕಸಬಾ ಮತ್ತು ದುದ್ದ ಹೋಬಳಿ ವ್ಯಾಪ್ತಿಯ ಕೆರೆಕಟ್ಟೆಗಳು ಕೋಡಿ ಬಿದ್ದಿವೆ.</p>.<p>ಮಳವಳ್ಳಿ ತಾಲ್ಲೂಕು ಹಲಗೂರು ಭಾಗದಲ್ಲೂ ಭಾರಿ ಮಳೆಯಾಗಿದೆ ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದ ಮಳಿಗೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಸಮೀಪದ ಶಿಂಷಾ ನದಿ ತುಂಬಿ ಹರಿಯುತ್ತಿದ್ದು, ಬೆಂಕಿ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾಗಿದೆ.</p>.<p>ಕನ್ನಲಿ, ಹೊಸ ಬೂದನೂರು ಗ್ರಾಮಗಳ ಕೆರೆಗಳು ಕೋಡಿ ಬಿದ್ದಿದ್ದು, 140 ಎಕರೆ ಜಮೀನಿಗೆ ನೀರು ನುಗ್ಗಿದೆ. ಶ್ರೀರಂಗಪಟ್ಟಣ, ಪಾಂಡವಪುರ, ಮಳವಳ್ಳಿ, ಕೆ.ಆರ್.ಪೇಟೆ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಹಾಸನದಲ್ಲಿ ಮಂಗಳವಾರ ಬೆಳಗಿನ ಜಾವದವರೆಗೂ ಸುರಿಯಿತು. ಚನ್ನರಾಯಪಟ್ಟಣ ತಾಲ್ಲೂಕಿನ ಚನ್ನೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆ ಮಂಗಳವಾರ ಬೆಳಿಗ್ಗೆ 8.30ರ ಸಮಯದಲ್ಲಿ ಕುಸಿದಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾರೂ ಇರದ ಕಾರಣ ಅನಾಹುತ ತಪ್ಪಿದೆ. ಅರಸೀಕೆರೆ ತಾಲ್ಲೂಕಿನ ಹಳೇಕಲ್ಲನಾಯಕನಹಳ್ಳಿಯ ಹಾಗೂ ಮುರುಂಡಿ ಗ್ರಾಮದ ಬಣಜಾರ ತಾಂಡಾದಲ್ಲಿ ಒಂದೊಂದು ಮನೆ ಕುಸಿದಿದೆ.</p>.<p>ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರಾತ್ರಿಯಿಡೀ ಭರ್ಜರಿ ಮಳೆಯಾಗಿದ್ದು, ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದೆ. 27ಕ್ಕೂ ಅಧಿಕ ಗಿಡಮರಗಳು ನೆಲಕ್ಕುರುಳಿದ್ದು, 47 ಮನೆಗಳಿಗೆ ನೀರು ನುಗ್ಗಿದೆ.</p>.<p>ಟಿ.ಸಿ. ಹುಂಡಿ ಗ್ರಾಮದ ಮುಖ್ಯರಸ್ತೆಯಲ್ಲಿನ ಬೃಹತ್ ಆಲದ ಮರವೊಂದು ಬುಡಸಮೇತ ಉರುಳಿಬಿದ್ದಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಗ್ರಾಮದ ಅನುದಾನರಹಿತ ಶಾಲೆ ಕೊಠಡಿಯ ಗೋಡೆ ಕುಸಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಯ ಹಲವೆಡೆ ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದೆ.</p>.<p>ಮಂಡ್ಯ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾಲಹಳ್ಳಿ ಕೊಳೆಗೇರಿಯ ಮನೆಗಳಿಗೆ ನೀರು ನುಗ್ಗಿದೆ. ಮನೆಗಳಲ್ಲಿದ್ದ ವಸ್ತುಗಳು ಹಾಳಾಗಿವೆ. ತಾಲ್ಲೂಕಿನ ಕೆರಗೋಡು, ಕಸಬಾ ಮತ್ತು ದುದ್ದ ಹೋಬಳಿ ವ್ಯಾಪ್ತಿಯ ಕೆರೆಕಟ್ಟೆಗಳು ಕೋಡಿ ಬಿದ್ದಿವೆ.</p>.<p>ಮಳವಳ್ಳಿ ತಾಲ್ಲೂಕು ಹಲಗೂರು ಭಾಗದಲ್ಲೂ ಭಾರಿ ಮಳೆಯಾಗಿದೆ ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದ ಮಳಿಗೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಸಮೀಪದ ಶಿಂಷಾ ನದಿ ತುಂಬಿ ಹರಿಯುತ್ತಿದ್ದು, ಬೆಂಕಿ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾಗಿದೆ.</p>.<p>ಕನ್ನಲಿ, ಹೊಸ ಬೂದನೂರು ಗ್ರಾಮಗಳ ಕೆರೆಗಳು ಕೋಡಿ ಬಿದ್ದಿದ್ದು, 140 ಎಕರೆ ಜಮೀನಿಗೆ ನೀರು ನುಗ್ಗಿದೆ. ಶ್ರೀರಂಗಪಟ್ಟಣ, ಪಾಂಡವಪುರ, ಮಳವಳ್ಳಿ, ಕೆ.ಆರ್.ಪೇಟೆ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಹಾಸನದಲ್ಲಿ ಮಂಗಳವಾರ ಬೆಳಗಿನ ಜಾವದವರೆಗೂ ಸುರಿಯಿತು. ಚನ್ನರಾಯಪಟ್ಟಣ ತಾಲ್ಲೂಕಿನ ಚನ್ನೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆ ಮಂಗಳವಾರ ಬೆಳಿಗ್ಗೆ 8.30ರ ಸಮಯದಲ್ಲಿ ಕುಸಿದಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾರೂ ಇರದ ಕಾರಣ ಅನಾಹುತ ತಪ್ಪಿದೆ. ಅರಸೀಕೆರೆ ತಾಲ್ಲೂಕಿನ ಹಳೇಕಲ್ಲನಾಯಕನಹಳ್ಳಿಯ ಹಾಗೂ ಮುರುಂಡಿ ಗ್ರಾಮದ ಬಣಜಾರ ತಾಂಡಾದಲ್ಲಿ ಒಂದೊಂದು ಮನೆ ಕುಸಿದಿದೆ.</p>.<p>ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರಾತ್ರಿಯಿಡೀ ಭರ್ಜರಿ ಮಳೆಯಾಗಿದ್ದು, ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದೆ. 27ಕ್ಕೂ ಅಧಿಕ ಗಿಡಮರಗಳು ನೆಲಕ್ಕುರುಳಿದ್ದು, 47 ಮನೆಗಳಿಗೆ ನೀರು ನುಗ್ಗಿದೆ.</p>.<p>ಟಿ.ಸಿ. ಹುಂಡಿ ಗ್ರಾಮದ ಮುಖ್ಯರಸ್ತೆಯಲ್ಲಿನ ಬೃಹತ್ ಆಲದ ಮರವೊಂದು ಬುಡಸಮೇತ ಉರುಳಿಬಿದ್ದಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಗ್ರಾಮದ ಅನುದಾನರಹಿತ ಶಾಲೆ ಕೊಠಡಿಯ ಗೋಡೆ ಕುಸಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>