<p><strong>ಮಡಿಕೇರಿ/ಕಲಬುರಗಿ:</strong> ಕೊಡಗು ಜಿಲ್ಲೆಯಲ್ಲಿ ಒಂದೆರಡು ದಿನ ಬಿಡುವು ನೀಡಿದ್ದ ಮಳೆ ಭಾನುವಾರ ಮತ್ತೆ ಆರಂಭವಾಗಿದೆ. ಮಡಿಕೇರಿಯಲ್ಲಿ ಆಗಾಗ ದಿನವಿಡೀ ಬಿರುಸಿನ ಮಳೆ ಸುರಿಯಿತು. ವಿರಾಜಪೇಟೆಯಲ್ಲೂ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗಿದೆ.</p><p>ಭಾನುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ 5 ಸೆಂ.ಮೀನಷ್ಟು ಮಳೆಯಾಗಿದೆ.</p><p>ಮೈಸೂರು ನಗರದಲ್ಲಿ ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ಸಮಯ ಚದುರಿದಂತೆ ಸಾಧಾರಣ ಮಳೆ ಬಿದ್ದಿತು.</p><p>ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್ ಜಿಲ್ಲೆಗಳ ವಿವಿಧ ತಾಲ್ಲೂಕುಗಳಲ್ಲಿ ಧಾರಾಕಾರ ಮಳೆಯಾಗಿದೆ. ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹನುಮಸಾಗರದಲ್ಲಿ ತುಂತುರು ಮಳೆ ಸುರಿದಿದೆ.</p><p>ಕಲಬುರಗಿಯಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸೆಕೆಯೂ ಹೆಚ್ಚಾಗಿತ್ತು. ಆಗಸದಲ್ಲಿ ದಟ್ಟೈಸಿದ್ದ ಮೋಡಗಳು ಮಧ್ಯಾಹ್ನ 2.45ರ ಸುಮಾರಿಗೆ ಧಾರಾಕಾರ ಮಳೆ ಸುರಿಸಿದವು. ಬಳಿಕ ಜಿಟಿ–ಜಿಟಿ ಮಳೆಯಾಯಿತು. ಸಂಜೆ 5 ಗಂಟೆ ಹೊತ್ತಿಗೆ ಮತ್ತೆ ಧಾರಾಕಾರ ಮಳೆ ಸುರಿಯಿತು. ಒಂದು ವಾರದ ಬಿಡುವಿನ ಬಳಿಕ ಸುರಿದ ಬಿರುಸಿನ ಮಳೆಗೆ ಚರಂಡಿಗಳು ತುಂಬಿ ಹರಿದವು. ಕಾವೇರಿದ್ದ ವಾತಾವರಣವೂ ತಂಪಾಯಿತು.</p><p>ಕಲಬುರಗಿ ಜಿಲ್ಲೆಯ ಚಿಂಚೋಳಿ, ಚಿತ್ತಾಪುರ, ಕಮಲಾಪುರ, ಕಾಳಗಿ, ಶಹಾಬಾದ್ ತಾಲ್ಲೂಕುಗಳಲ್ಲೂ ಉತ್ತಮ ಮಳೆಯಾಗಿದೆ. ಈ ಮಳೆಯು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮಳೆ ಹಾಗೂ ತೇವಾಂಶ ಕೊರತೆ ಎದುರಿಸುತ್ತಿದ್ದ ಹೆಸರು, ಉದ್ದು, ತೊಗರಿ ಬೆಳೆಗಳಿಗೆ ಭಾನುವಾರದ ಮಳೆ ಪೂರಕವಾಗಿದೆ. ಕಳೆದೊಂದು ವಾರದಿಂದ ಮಳೆ ಬಾರದೆ ರೈತರು ಮುಂಗಾರು ಬೆಳೆ ತೊಗರಿ ಬಿತ್ತನೆ ಸ್ಥಗಿತಗೊಳಿಸಿದ್ದರು.</p><p><strong>ಬೀದರ್ ವರದಿ: </strong>ಬೀದರ್ ಜಿಲ್ಲೆಯ ಹಲವೆಡೆ ಸತತ ಎರಡನೇ ದಿನವೂ ವರ್ಷಧಾರೆಯಾಗಿದೆ. ಭಾನುವಾರ ಸಂಜೆ ಅರ್ಧಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆಯಾಗಿದೆ. ಜೋರು ಮಳೆಗೆ ಬೀದರ್ನ ಮೈಲೂರ್ ಬಡಾವಣೆಯಲ್ಲಿರುವ ಸರ್ಕಾರಿ ಶಾಲಾ ಕೊಠಡಿಯ ಗೋಡೆ ಕುಸಿದಿದೆ. ಜಿಲ್ಲೆಯ ಬಸವಕಲ್ಯಾಣ, ಭಾಲ್ಕಿ, ಚಿಟಗುಪ್ಪದಲ್ಲೂ ಮಳೆಯಾಗಿದೆ.</p><p><strong>ಮಂಗಳೂರು ವರದಿ: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಮುಂದುವರಿದಿದೆ. ಬೆಳಿಗ್ಗೆಯಿಂದ ಸಂಜೆವರೆಗೂ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಯಿತು. ಪಶ್ಚಿಮ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಜಾಸ್ತಿ ಇತ್ತು.</p><p>ಜಿಲ್ಲೆಯಾದ್ಯಂತ ವಾರದಿಂದ ಈಚೆಗೆ ನಿತ್ಯವೂ ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದೆ. ನಗರದ ಬಜಾಲ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದು ಗುಡ್ಡ ಕುಸಿತದಿಂದ ಹಾನಿಗೊಳಗಾಗಿದೆ. ಪಂಜಿಮೊಗರುವಿನ ಇಳಿಜಾರು ಪ್ರದೇಶದಲ್ಲಿ ನಾಲ್ಕು ಮನೆಗಳು ಕುಸಿಯುವ ಅಪಾಯವನ್ನು ಎದುರಿಸುತ್ತಿವೆ. ಈ ಮನೆಗಳಲ್ಲಿ ವಾಸವಿದ್ದ ಕುಟುಂಬಗಳನ್ನು ಆಶ್ರಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ/ಕಲಬುರಗಿ:</strong> ಕೊಡಗು ಜಿಲ್ಲೆಯಲ್ಲಿ ಒಂದೆರಡು ದಿನ ಬಿಡುವು ನೀಡಿದ್ದ ಮಳೆ ಭಾನುವಾರ ಮತ್ತೆ ಆರಂಭವಾಗಿದೆ. ಮಡಿಕೇರಿಯಲ್ಲಿ ಆಗಾಗ ದಿನವಿಡೀ ಬಿರುಸಿನ ಮಳೆ ಸುರಿಯಿತು. ವಿರಾಜಪೇಟೆಯಲ್ಲೂ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗಿದೆ.</p><p>ಭಾನುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ 5 ಸೆಂ.ಮೀನಷ್ಟು ಮಳೆಯಾಗಿದೆ.</p><p>ಮೈಸೂರು ನಗರದಲ್ಲಿ ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ಸಮಯ ಚದುರಿದಂತೆ ಸಾಧಾರಣ ಮಳೆ ಬಿದ್ದಿತು.</p><p>ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್ ಜಿಲ್ಲೆಗಳ ವಿವಿಧ ತಾಲ್ಲೂಕುಗಳಲ್ಲಿ ಧಾರಾಕಾರ ಮಳೆಯಾಗಿದೆ. ಯಾದಗಿರಿ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹನುಮಸಾಗರದಲ್ಲಿ ತುಂತುರು ಮಳೆ ಸುರಿದಿದೆ.</p><p>ಕಲಬುರಗಿಯಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸೆಕೆಯೂ ಹೆಚ್ಚಾಗಿತ್ತು. ಆಗಸದಲ್ಲಿ ದಟ್ಟೈಸಿದ್ದ ಮೋಡಗಳು ಮಧ್ಯಾಹ್ನ 2.45ರ ಸುಮಾರಿಗೆ ಧಾರಾಕಾರ ಮಳೆ ಸುರಿಸಿದವು. ಬಳಿಕ ಜಿಟಿ–ಜಿಟಿ ಮಳೆಯಾಯಿತು. ಸಂಜೆ 5 ಗಂಟೆ ಹೊತ್ತಿಗೆ ಮತ್ತೆ ಧಾರಾಕಾರ ಮಳೆ ಸುರಿಯಿತು. ಒಂದು ವಾರದ ಬಿಡುವಿನ ಬಳಿಕ ಸುರಿದ ಬಿರುಸಿನ ಮಳೆಗೆ ಚರಂಡಿಗಳು ತುಂಬಿ ಹರಿದವು. ಕಾವೇರಿದ್ದ ವಾತಾವರಣವೂ ತಂಪಾಯಿತು.</p><p>ಕಲಬುರಗಿ ಜಿಲ್ಲೆಯ ಚಿಂಚೋಳಿ, ಚಿತ್ತಾಪುರ, ಕಮಲಾಪುರ, ಕಾಳಗಿ, ಶಹಾಬಾದ್ ತಾಲ್ಲೂಕುಗಳಲ್ಲೂ ಉತ್ತಮ ಮಳೆಯಾಗಿದೆ. ಈ ಮಳೆಯು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮಳೆ ಹಾಗೂ ತೇವಾಂಶ ಕೊರತೆ ಎದುರಿಸುತ್ತಿದ್ದ ಹೆಸರು, ಉದ್ದು, ತೊಗರಿ ಬೆಳೆಗಳಿಗೆ ಭಾನುವಾರದ ಮಳೆ ಪೂರಕವಾಗಿದೆ. ಕಳೆದೊಂದು ವಾರದಿಂದ ಮಳೆ ಬಾರದೆ ರೈತರು ಮುಂಗಾರು ಬೆಳೆ ತೊಗರಿ ಬಿತ್ತನೆ ಸ್ಥಗಿತಗೊಳಿಸಿದ್ದರು.</p><p><strong>ಬೀದರ್ ವರದಿ: </strong>ಬೀದರ್ ಜಿಲ್ಲೆಯ ಹಲವೆಡೆ ಸತತ ಎರಡನೇ ದಿನವೂ ವರ್ಷಧಾರೆಯಾಗಿದೆ. ಭಾನುವಾರ ಸಂಜೆ ಅರ್ಧಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆಯಾಗಿದೆ. ಜೋರು ಮಳೆಗೆ ಬೀದರ್ನ ಮೈಲೂರ್ ಬಡಾವಣೆಯಲ್ಲಿರುವ ಸರ್ಕಾರಿ ಶಾಲಾ ಕೊಠಡಿಯ ಗೋಡೆ ಕುಸಿದಿದೆ. ಜಿಲ್ಲೆಯ ಬಸವಕಲ್ಯಾಣ, ಭಾಲ್ಕಿ, ಚಿಟಗುಪ್ಪದಲ್ಲೂ ಮಳೆಯಾಗಿದೆ.</p><p><strong>ಮಂಗಳೂರು ವರದಿ: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಮುಂದುವರಿದಿದೆ. ಬೆಳಿಗ್ಗೆಯಿಂದ ಸಂಜೆವರೆಗೂ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಯಿತು. ಪಶ್ಚಿಮ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಜಾಸ್ತಿ ಇತ್ತು.</p><p>ಜಿಲ್ಲೆಯಾದ್ಯಂತ ವಾರದಿಂದ ಈಚೆಗೆ ನಿತ್ಯವೂ ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದೆ. ನಗರದ ಬಜಾಲ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದು ಗುಡ್ಡ ಕುಸಿತದಿಂದ ಹಾನಿಗೊಳಗಾಗಿದೆ. ಪಂಜಿಮೊಗರುವಿನ ಇಳಿಜಾರು ಪ್ರದೇಶದಲ್ಲಿ ನಾಲ್ಕು ಮನೆಗಳು ಕುಸಿಯುವ ಅಪಾಯವನ್ನು ಎದುರಿಸುತ್ತಿವೆ. ಈ ಮನೆಗಳಲ್ಲಿ ವಾಸವಿದ್ದ ಕುಟುಂಬಗಳನ್ನು ಆಶ್ರಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>