<p><strong>ಬೆಂಗಳೂರು</strong>: ಬರದ ಬೇಗೆಯಿಂದ ಬೆಂದಿದ್ದ ನಾಡಿನ ಹಲವು ಜಿಲ್ಲೆಗಳಲ್ಲಿ ಭಾನುವಾರ ಬಿರುಸಿನ ಮಳೆಯಾಗಿ ಸಂಭ್ರಮ ಮೂಡಿಸಿದೆ. ಹುಬ್ಬಳ್ಳಿ, ಧಾರವಾಡ, ಚಿಕ್ಕಮಗಳೂರು, ಬೆಳಗಾವಿ, ಮೈಸೂರು, ಹಾಸನ, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆ ಬಿದ್ದಿದೆ.</p>.<p>ಮುಂಗಾರು ಹಂಗಾಮಿನ ಕೃಷಿಗೆ ಭೂಮಿ ಹದಗೊಳಿಸುವುದಕ್ಕೆ ಈ ಮಳೆ ಸಹಕಾರಿಯಾಗಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಹಲವು ಕೆರೆಗಳಿಗೆ ನೀರು ಹರಿಯುವುದನ್ನು ಕಂಡು ರೈತರು ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದಾರೆ.</p>.<p>ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಮಧ್ಯಾಹ್ನ 2 ಗಂಟೆಗೂ ಹೆಚ್ಚು ಅವಧಿಗೆ, ಕೊಳ್ಳೇಗಾಲದಲ್ಲಿ 45 ನಿಮಿಷಗಳಿಗೂ ಹೆಚ್ಚು ಹೊತ್ತು ಮಳೆ ಸುರಿದಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಜಾವದವರೆಗೆ ಧಾರಾಕಾರ ಮಳೆಯಾಗಿದೆ. ಚನ್ನಗಿರಿ ಬಳಿಯ ಜೋಳದಹಾಳ್ ಗ್ರಾಮದ ಕೆರೆ ಕೋಡಿ ಬಿದ್ದಿದೆ.</p>.<p>ವಿಜಯಪುರ, ಹೊಸಪೇಟೆ, ಬಳ್ಳಾರಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ರಭಸದ ಮಳೆಯಾಗಿದ್ದು ಬಿರು ಬಿಸಿಲಿನ ವಾತಾವರಣ ತಗ್ಗಿದೆ. ಚಿತ್ರದುರ್ಗ ಜಿಲ್ಲೆಯ ಕೆಲ್ಲೋಡು ಬಳಿ ವೇದಾವತಿ ಬ್ಯಾರೇಜ್ ತುಂಬಿ ಹರಿದಿದೆ. ಹಲವೆಡೆ ಜಲಪಾತಗಳು ಮೈದುಂಬಿ ಹರಿದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬರದ ಬೇಗೆಯಿಂದ ಬೆಂದಿದ್ದ ನಾಡಿನ ಹಲವು ಜಿಲ್ಲೆಗಳಲ್ಲಿ ಭಾನುವಾರ ಬಿರುಸಿನ ಮಳೆಯಾಗಿ ಸಂಭ್ರಮ ಮೂಡಿಸಿದೆ. ಹುಬ್ಬಳ್ಳಿ, ಧಾರವಾಡ, ಚಿಕ್ಕಮಗಳೂರು, ಬೆಳಗಾವಿ, ಮೈಸೂರು, ಹಾಸನ, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆ ಬಿದ್ದಿದೆ.</p>.<p>ಮುಂಗಾರು ಹಂಗಾಮಿನ ಕೃಷಿಗೆ ಭೂಮಿ ಹದಗೊಳಿಸುವುದಕ್ಕೆ ಈ ಮಳೆ ಸಹಕಾರಿಯಾಗಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಹಲವು ಕೆರೆಗಳಿಗೆ ನೀರು ಹರಿಯುವುದನ್ನು ಕಂಡು ರೈತರು ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದಾರೆ.</p>.<p>ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಮಧ್ಯಾಹ್ನ 2 ಗಂಟೆಗೂ ಹೆಚ್ಚು ಅವಧಿಗೆ, ಕೊಳ್ಳೇಗಾಲದಲ್ಲಿ 45 ನಿಮಿಷಗಳಿಗೂ ಹೆಚ್ಚು ಹೊತ್ತು ಮಳೆ ಸುರಿದಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಜಾವದವರೆಗೆ ಧಾರಾಕಾರ ಮಳೆಯಾಗಿದೆ. ಚನ್ನಗಿರಿ ಬಳಿಯ ಜೋಳದಹಾಳ್ ಗ್ರಾಮದ ಕೆರೆ ಕೋಡಿ ಬಿದ್ದಿದೆ.</p>.<p>ವಿಜಯಪುರ, ಹೊಸಪೇಟೆ, ಬಳ್ಳಾರಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ರಭಸದ ಮಳೆಯಾಗಿದ್ದು ಬಿರು ಬಿಸಿಲಿನ ವಾತಾವರಣ ತಗ್ಗಿದೆ. ಚಿತ್ರದುರ್ಗ ಜಿಲ್ಲೆಯ ಕೆಲ್ಲೋಡು ಬಳಿ ವೇದಾವತಿ ಬ್ಯಾರೇಜ್ ತುಂಬಿ ಹರಿದಿದೆ. ಹಲವೆಡೆ ಜಲಪಾತಗಳು ಮೈದುಂಬಿ ಹರಿದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>