<p><strong>ಮೈಸೂರು:</strong> ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಬುಧವಾರ ವರುಣನ ಅಬ್ಬರ ಮುಂದು ವರಿದಿದೆ. ಸತತ ಮಳೆಯಿಂದಾಗಿ ಕಲಬುರಗಿಯ ತಾಪಮಾನ 25 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ.</p> <p>ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಿಸಿಲೆ ರಸ್ತೆಯಲ್ಲಿ ವಿದ್ಯುತ್ ತಂತಿಗಳೊಂದಿಗೆ ಮರ ಬಿದ್ದಿದ್ದು, ಸುಬ್ರಹ್ಮಣ್ಯಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು.</p> <p>ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕಿನಲ್ಲಿ ಮಳೆಯಾಗುತ್ತಿದ್ದು, ಕೊಡಗಿನಲ್ಲಿ ಎರಡು ದಿನ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.</p> <p>ಹಾರಂಗಿ ಜಲಾಶಯದ ಮಟ್ಟ ಬುಧವಾರ 2,841.93 ಅಡಿಗಳಿಗೆ ತಲುಪಿದೆ. (2,859 ಅಡಿ ಗರಿಷ್ಠ ಮಟ್ಟ) 4,724 ಕ್ಯುಸೆಕ್ ಒಳ ಹರಿವಿದೆ.</p> <p>ಬೇಲೂರು ತಾಲ್ಲೂಕಿನ ಯಗಚಿ ಜಲಾಶಯ ಭರ್ತಿಯಾಗಿದೆ. ಹೇಮಾವತಿ ಜಲಾಶಯಕ್ಕೆ 22 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜಲಾಶಯ ಭರ್ತಿಗೆ ಇನ್ನು 18 ಅಡಿ ಬಾಕಿ ಇದೆ.</p> <p>ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಹಲವೆಡೆ ಮಳೆ ಮುಂದುವರಿದಿದೆ. </p> <p>ಬೀದರ್, ಕಮಲನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮಾಂಜ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಔರಾದ್ ತಾಲ್ಲೂಕಿನ ಕೌಠಾ (ಬಿ) ಸೇತುವೆ ಸಮೀಪದಿಂದ ಬೀದರ್ ತಾಲ್ಲೂಕಿನ ಇಸ್ಲಾಂಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ನೀರು ಹರಿಯುತ್ತಿದೆ. ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಿದೆ.</p> <p>ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ದಿನವಿಡೀ ಸುರಿದ ಮಳೆ, ಸಂಜೆ ಬಳಿಕ ಮಳೆ ಬಿರುಸು ಪಡೆಯಿತು.</p> <p>ಮಳೆ ಗಾಳಿಯ ಅಬ್ಬರದ ಪರಿಣಾಮ ಅಂಕೋಲಾ ತಾಲ್ಲೂಕಿನ ಹಾರವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತರಂಗಮೇಟ ಮಜರೆಯಲ್ಲಿ ಕಡಲು ಕೊರೆತ ಆರಂಭಗೊಂಡಿದೆ. ಕೆಲ ತಿಂಗಳ ಹಿಂದೆ ನಿರ್ಮಿಸಿದ್ದ ಅಲೆ ತಡೆಗೋಡೆಯು ಅಲೆಗಳ ಅಬ್ಬರಕ್ಕೆ ಸಮುದ್ರ ಪಾಲಾಗಿದೆ.</p> <p>ಚಡಚಣ (ವಿಜಯಪುರ ಜಿಲ್ಲೆ): ಉಜನಿ ಹಾಗೂ ವೀರಾ ಆಣೆಕಟ್ಟು ಜಲಾಯನ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಭೀಮಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಬುಧವಾರ ವರುಣನ ಅಬ್ಬರ ಮುಂದು ವರಿದಿದೆ. ಸತತ ಮಳೆಯಿಂದಾಗಿ ಕಲಬುರಗಿಯ ತಾಪಮಾನ 25 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ.</p> <p>ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಿಸಿಲೆ ರಸ್ತೆಯಲ್ಲಿ ವಿದ್ಯುತ್ ತಂತಿಗಳೊಂದಿಗೆ ಮರ ಬಿದ್ದಿದ್ದು, ಸುಬ್ರಹ್ಮಣ್ಯಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು.</p> <p>ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕಿನಲ್ಲಿ ಮಳೆಯಾಗುತ್ತಿದ್ದು, ಕೊಡಗಿನಲ್ಲಿ ಎರಡು ದಿನ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.</p> <p>ಹಾರಂಗಿ ಜಲಾಶಯದ ಮಟ್ಟ ಬುಧವಾರ 2,841.93 ಅಡಿಗಳಿಗೆ ತಲುಪಿದೆ. (2,859 ಅಡಿ ಗರಿಷ್ಠ ಮಟ್ಟ) 4,724 ಕ್ಯುಸೆಕ್ ಒಳ ಹರಿವಿದೆ.</p> <p>ಬೇಲೂರು ತಾಲ್ಲೂಕಿನ ಯಗಚಿ ಜಲಾಶಯ ಭರ್ತಿಯಾಗಿದೆ. ಹೇಮಾವತಿ ಜಲಾಶಯಕ್ಕೆ 22 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜಲಾಶಯ ಭರ್ತಿಗೆ ಇನ್ನು 18 ಅಡಿ ಬಾಕಿ ಇದೆ.</p> <p>ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಹಲವೆಡೆ ಮಳೆ ಮುಂದುವರಿದಿದೆ. </p> <p>ಬೀದರ್, ಕಮಲನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮಾಂಜ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಔರಾದ್ ತಾಲ್ಲೂಕಿನ ಕೌಠಾ (ಬಿ) ಸೇತುವೆ ಸಮೀಪದಿಂದ ಬೀದರ್ ತಾಲ್ಲೂಕಿನ ಇಸ್ಲಾಂಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ನೀರು ಹರಿಯುತ್ತಿದೆ. ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಿದೆ.</p> <p>ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ದಿನವಿಡೀ ಸುರಿದ ಮಳೆ, ಸಂಜೆ ಬಳಿಕ ಮಳೆ ಬಿರುಸು ಪಡೆಯಿತು.</p> <p>ಮಳೆ ಗಾಳಿಯ ಅಬ್ಬರದ ಪರಿಣಾಮ ಅಂಕೋಲಾ ತಾಲ್ಲೂಕಿನ ಹಾರವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತರಂಗಮೇಟ ಮಜರೆಯಲ್ಲಿ ಕಡಲು ಕೊರೆತ ಆರಂಭಗೊಂಡಿದೆ. ಕೆಲ ತಿಂಗಳ ಹಿಂದೆ ನಿರ್ಮಿಸಿದ್ದ ಅಲೆ ತಡೆಗೋಡೆಯು ಅಲೆಗಳ ಅಬ್ಬರಕ್ಕೆ ಸಮುದ್ರ ಪಾಲಾಗಿದೆ.</p> <p>ಚಡಚಣ (ವಿಜಯಪುರ ಜಿಲ್ಲೆ): ಉಜನಿ ಹಾಗೂ ವೀರಾ ಆಣೆಕಟ್ಟು ಜಲಾಯನ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಭೀಮಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>