<p><strong>ಹುಬ್ಬಳ್ಳಿ</strong>: ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯಲ್ಲಿ ಸೋಮವಾರ ಬಿರುಗಾಳಿ ಸಹಿತ ಮಳೆಯಾಯಿತು. ವರ್ಷದ ಮೊದಲ ಮಳೆಯು, ವಾತಾವರಣವನ್ನು ತಂಪಾಗಿಸಿತು.</p><p>ವಿಜಯಪುರ ನಗರ, ತಿಕೋಟಾ ಮತ್ತು ಚಡಚಣ ತಾಲ್ಲೂಕು ವ್ಯಾಪ್ತಿ ಹಾಗೂ ಹೊರ್ತಿ, ನಿವರಗಿ, ಇಂಚಗೇರಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಯಿತು.</p><p>ಜಿಲ್ಲೆಯಾದ್ಯಂತ ದ್ರಾಕ್ಷಿ ಬೆಳೆ ಕಟಾವಿಗೆ ಬಂದಿದ್ದು, ಒಣ ದ್ರಾಕ್ಷಿ ತಯಾರಿಕೆಗೆ ಸಜ್ಜಾಗಿರುವ ಹೊತ್ತಿ<br>ನಲ್ಲಿ ಮಳೆ ಆಗಿರುವುದು ತೊಂದರೆಯಾಗಿದೆ. ಚಡಚಣ ತಾಲ್ಲೂಕಿನ ನಿವರಗಿಯಲ್ಲಿ ಗಾಳಿಗೆ ದ್ರಾಕ್ಷಿ ಸಾಲು ನೆಲಕ್ಕುರುಳಿದೆ.</p><p>ಬಾಗಲಕೋಟೆ ಜಿಲ್ಲೆಯ ಅಮೀನಗಡ, ನೀರಲಕೇರಿ ಸೇರಿ ವಿವಿಧೆಡೆ 10 ನಿಮಿಷಕ್ಕೂ ಹೆಚ್ಚು ಸಮಯ ತುಂತುರು ಮಳೆಯಾಯಿತು., ಅಮೀನಗಡ, ಕಮತಗಿ, ಮಹಾಲಿಂಗಪುರ, ರಬಕವಿ, ಹುನಗುಂದದಲ್ಲೂ ಮಳೆಯಾಯಿತು.</p><p>ಗದಗ ಜಿಲ್ಲೆಯಲ್ಲಿ ಮುಂಡರಗಿ ಮತ್ತು ರೋಣ ತಾಲ್ಲೂಕಿನ ಕೆಲವೆಡೆ ಮಳೆಯಾಯಿತು. ಬೆಳೆಗಳ ಒಕ್ಕಣೆ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಕಡಲೆ, ಜೋಳ, ಕುಸುಬೆ, ಗೋಧಿ ಬೆಳೆಯನ್ನು ರಕ್ಷಿಸಿ<br>ಕೊಳ್ಳಲು ಹರಸಾಹಸಪಟ್ಟರು.</p><h2><strong>ಕಲಬುರಗಿ, ಬೀದರ್ನಲ್ಲಿ ತುಂತುರು ಮಳೆ: </strong>(ಕಲಬುರಗಿ ವರದಿ): </h2><p>ಕಲ್ಯಾಣದ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ ಸೇರಿದಂತೆ ವಿವಿಧೆಡೆ ಸೋಮವಾರ ತುಂತುರು ಮಳೆಯಾಗಿದೆ.</p><p>ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹುಲೆಗುಡ್ಡ ಗ್ರಾಮದಲ್ಲಿ ಸೋಮವಾರ ಸಿಡಿಲು ಬಡಿದು ಎತ್ತೊಂದು ಮೃತಪಟ್ಟಿದೆ. ರೈತ ಅಜ್ಜಪ್ಪ ಬಂಡ್ಲಿ ಅವರಿಗೆ ಸೇರಿದ ತೋಟದಲ್ಲಿ ಎರಡು ಎತ್ತುಗಳನ್ನು ಕಟ್ಟಲಾಗಿತ್ತು. ಮಧ್ಯಾಹ್ನ ಗುಡುಗು ಮಿಂಚು ಸಹಿತ ಮಳೆಯ ವೇಳೆ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ.</p><p>ಕಲಬುರಗಿ ನಗರದ, ಚಿಂಚೋಳಿ ಸೇರಿದಂತೆ ಕೆಲವೆಡೆ ಸಂಜೆ ತುಂತುರು ಮಳೆಯಾಗಿದೆ. ಬೀದರ್ ಜಿಲ್ಲೆಯ ಬೀದರ್, ಭಾಲ್ಕಿಯಲ್ಲಿ ಸೋಮವಾರ ಸಂಜೆ ಕೆಲ ಗಳಿಗೆ ಸಾಧಾರಣ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯಲ್ಲಿ ಸೋಮವಾರ ಬಿರುಗಾಳಿ ಸಹಿತ ಮಳೆಯಾಯಿತು. ವರ್ಷದ ಮೊದಲ ಮಳೆಯು, ವಾತಾವರಣವನ್ನು ತಂಪಾಗಿಸಿತು.</p><p>ವಿಜಯಪುರ ನಗರ, ತಿಕೋಟಾ ಮತ್ತು ಚಡಚಣ ತಾಲ್ಲೂಕು ವ್ಯಾಪ್ತಿ ಹಾಗೂ ಹೊರ್ತಿ, ನಿವರಗಿ, ಇಂಚಗೇರಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಯಿತು.</p><p>ಜಿಲ್ಲೆಯಾದ್ಯಂತ ದ್ರಾಕ್ಷಿ ಬೆಳೆ ಕಟಾವಿಗೆ ಬಂದಿದ್ದು, ಒಣ ದ್ರಾಕ್ಷಿ ತಯಾರಿಕೆಗೆ ಸಜ್ಜಾಗಿರುವ ಹೊತ್ತಿ<br>ನಲ್ಲಿ ಮಳೆ ಆಗಿರುವುದು ತೊಂದರೆಯಾಗಿದೆ. ಚಡಚಣ ತಾಲ್ಲೂಕಿನ ನಿವರಗಿಯಲ್ಲಿ ಗಾಳಿಗೆ ದ್ರಾಕ್ಷಿ ಸಾಲು ನೆಲಕ್ಕುರುಳಿದೆ.</p><p>ಬಾಗಲಕೋಟೆ ಜಿಲ್ಲೆಯ ಅಮೀನಗಡ, ನೀರಲಕೇರಿ ಸೇರಿ ವಿವಿಧೆಡೆ 10 ನಿಮಿಷಕ್ಕೂ ಹೆಚ್ಚು ಸಮಯ ತುಂತುರು ಮಳೆಯಾಯಿತು., ಅಮೀನಗಡ, ಕಮತಗಿ, ಮಹಾಲಿಂಗಪುರ, ರಬಕವಿ, ಹುನಗುಂದದಲ್ಲೂ ಮಳೆಯಾಯಿತು.</p><p>ಗದಗ ಜಿಲ್ಲೆಯಲ್ಲಿ ಮುಂಡರಗಿ ಮತ್ತು ರೋಣ ತಾಲ್ಲೂಕಿನ ಕೆಲವೆಡೆ ಮಳೆಯಾಯಿತು. ಬೆಳೆಗಳ ಒಕ್ಕಣೆ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಕಡಲೆ, ಜೋಳ, ಕುಸುಬೆ, ಗೋಧಿ ಬೆಳೆಯನ್ನು ರಕ್ಷಿಸಿ<br>ಕೊಳ್ಳಲು ಹರಸಾಹಸಪಟ್ಟರು.</p><h2><strong>ಕಲಬುರಗಿ, ಬೀದರ್ನಲ್ಲಿ ತುಂತುರು ಮಳೆ: </strong>(ಕಲಬುರಗಿ ವರದಿ): </h2><p>ಕಲ್ಯಾಣದ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ ಸೇರಿದಂತೆ ವಿವಿಧೆಡೆ ಸೋಮವಾರ ತುಂತುರು ಮಳೆಯಾಗಿದೆ.</p><p>ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹುಲೆಗುಡ್ಡ ಗ್ರಾಮದಲ್ಲಿ ಸೋಮವಾರ ಸಿಡಿಲು ಬಡಿದು ಎತ್ತೊಂದು ಮೃತಪಟ್ಟಿದೆ. ರೈತ ಅಜ್ಜಪ್ಪ ಬಂಡ್ಲಿ ಅವರಿಗೆ ಸೇರಿದ ತೋಟದಲ್ಲಿ ಎರಡು ಎತ್ತುಗಳನ್ನು ಕಟ್ಟಲಾಗಿತ್ತು. ಮಧ್ಯಾಹ್ನ ಗುಡುಗು ಮಿಂಚು ಸಹಿತ ಮಳೆಯ ವೇಳೆ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ.</p><p>ಕಲಬುರಗಿ ನಗರದ, ಚಿಂಚೋಳಿ ಸೇರಿದಂತೆ ಕೆಲವೆಡೆ ಸಂಜೆ ತುಂತುರು ಮಳೆಯಾಗಿದೆ. ಬೀದರ್ ಜಿಲ್ಲೆಯ ಬೀದರ್, ಭಾಲ್ಕಿಯಲ್ಲಿ ಸೋಮವಾರ ಸಂಜೆ ಕೆಲ ಗಳಿಗೆ ಸಾಧಾರಣ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>