ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ, ವೇದಗಂಗಾ ನದಿಗಳಲ್ಲೂ ಒಳಹರಿವು ಏರಿಕೆಯಾಗಿದೆ. ಮಲಪ್ರಭಾ ನದಿಯ ನವಿಲುತೀರ್ಥ ಜಲಾಶಯ ಹಾಗೂ ಘಟಪ್ರಭಾ ನದಿಯ ಹಿಡಕಲ್ ಜಲಾಶಯಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಯಾವುದೇ ಕ್ಷಣದಲ್ಲಿ ಜಲಾಶಯದಿಂದ ನೀರನ್ನು ಹೊರಗೆ ಬಿಡುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮಾರ್ಕಂಡೇಯ ನದಿಯ ಶಿರೂರು ಜಲಾಶಯ ಬಹುತೇಕ ಭರ್ತಿಯಾಗಿದ್ದು, ಜಲಾಶಯದಿಂದ ನೀರನ್ನು ಹೊರಗೆ ಬಿಡಲಾಗುತ್ತಿದೆ.