ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ: ಸಿಡಿಲು ಬಡಿದು ಬಾಲಕ ಸಾವು

Last Updated 11 ಮೇ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು, ಕಲಬುರ್ಗಿ, ಚಿತ್ರದುರ್ಗ, ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಮಂಗಳ
ವಾರ ಉತ್ತಮ ಮಳೆಯಾಗಿದೆ. ಯಾದಗಿರಿ ಜಿಲ್ಲೆಯ ಕಕ್ಕೇರಾದಲ್ಲಿ ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮುಡಿಪು, ಪುತ್ತೂರು ವಿವಿಧೆಡೆ ಉತ್ತಮ, ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಧಾರಾಕಾರ ಮಳೆಯಾಗಿದ್ದು, ಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಿದೆ.

ಯಾದಗಿರಿ ಜಿಲ್ಲೆ ಕೆಂಭಾವಿ, ಹುಣಸಗಿ, ಕಲಬುರ್ಗಿ ಜಿಲ್ಲೆಯ ವಾಡಿಯಲ್ಲಿ ಗಾಳಿಗೆ ಮನೆಗಳ ಹೆಂಚು ಹಾರಿವೆ. ಕೊಪ್ಪಳ ಜಿಲ್ಲೆ ಹನಮಸಾಗರದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣ ಹಾಗೂ ಸುತ್ತಮುತ್ತ ಬಾಳೆ, ಮಾವು, ನುಗ್ಗೆ ಗಿಡಗಳು ನೆಲಕ್ಕುರುಳಿವೆ. ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಪಡೆದಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT