ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ನಲ್ಲಿ ಅಲ್ಲಲ್ಲಿ ಗಿಡಗಳು ರಸ್ತೆಗೆ ಅಡ್ಡಲಾಗಿ ಉರುಳಿವೆ. ಮಡಿಕೇರಿ, ನಾಪೋಕ್ಲು ಭಾಗದಲ್ಲಿ ಹೆಚ್ಚು ರಭಸದ ಮಳೆಯಾಯಿತು, ಸೋಮವಾರಪೇಟೆ, ವಿರಾಜಪೇಟೆ ಭಾಗದಲ್ಲಿ ಸಾಧಾರಣ ಮಳೆ ಬಿದ್ದಿತು. ಮೈಸೂರು ನಗರದಲ್ಲೂ ತುಂತುರು ಮಳೆಯಾಯಿತು.