<p><strong>ಬೆಂಗಳೂರು: </strong>ರೈತರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕಂಡುಕೊಳ್ಳಲು ಮತ್ತು ಪ್ರಗತಿಪರ ರೈತರ ಸಾಧನೆಗಳನ್ನು ಇತರರಿಗೂ ಪ್ರೇರಣೆಯಾಗಿಸುವ ಉದ್ದೇಶದಿಂದ ‘ರೈತ ವಾಸ್ತವ್ಯ’ ಕಾರ್ಯಕ್ರಮ ಹಮ್ಮಿಕೊಳ್ಳಲು ಕೃಷಿ ಸಚಿವ ಬಿ.ಸಿ. ಪಾಟೀಲ ಮುಂದಾಗಿದ್ದಾರೆ.</p>.<p>‘ಇಂಥದ್ದೊಂದು ಕಾರ್ಯಕ್ರಮಕ್ಕೆ ಸಚಿವರು ಈ ಹಿಂದೆಯೇ ಚಿಂತನೆ ನಡೆಸಿದ್ದರು. ಚಾಮರಾಜನಗರ ಜಿಲ್ಲೆಯ ರೈತರೊಬ್ಬರ ಮನೆಯಲ್ಲಿ ವಾಸ್ತವ್ಯ ಹೂಡಿ, ಸಮಸ್ಯೆಗಳಿಗೆ ಧ್ವನಿಯಾಗಲು ನಿರ್ಧರಿಸಿದ್ದರು. ಆದರೆ, ಕೋವಿಡ್ನಿಂದಾಗಿ ಯೋಜನೆ ಯನ್ನು ಕಾರ್ಯಗತಗೊಳಿಸಲು ಸಾಧ್ಯವಾಗಿರಲಿಲ್ಲ. ಇದೀಗ ಮತ್ತೆ ಈ ಬಗ್ಗೆ ಚಿಂತನೆ ನಡೆಸಿದ್ದಾರೆ’ ಎಂದು ಸಚಿವರ ಆಪ್ತ ಮೂಲಗಳು ತಿಳಿಸಿವೆ.</p>.<p>ಸಚಿವರು ಇಲಾಖೆಯ ಅಧಿಕಾರಿಗಳೊಂದಿಗೆ ರೈತರ ಮನೆಗಳಿಗೆ ತೆರಳಿ, ಅಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ರೈತನ ಕುಟುಂಬ ಮತ್ತು ಸುತ್ತಲಿನ ರೈತರ ಜತೆಗೆ ಕಾಲ ಕಳೆಯುವ ಮೂಲಕ ಕೃಷಿ ವಿಚಾರಗಳ ಬಗ್ಗೆ ಚರ್ಚಿಸುವುದು ಕಾರ್ಯಕ್ರಮದ ಉದ್ದೇಶ.</p>.<p>ಆ ಮೂಲಕ, ಕೃಷಿ ಉತ್ಪನ್ನಗಳ ಇಳುವರಿ ಹೆಚ್ಚಿಸುವುದು, ಉತ್ತಮ ಬೆಲೆ ಸಿಗುವಂತೆ ಮಾಡಲು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಲಹೆ ಸೂಚನೆಗಳನ್ನು ಪಡೆಯಲಿದ್ದಾರೆ. ಕೊರೊನಾ ಸೋಂಕು ಕಡಿಮೆಯಾದ ಬಳಿಕ ರೈತ ವಾಸ್ತವ್ಯದ ರೂಪುರೇಷೆ ಮತ್ತು ದಿನಾಂಕವೂ ನಿಗದಿಯಾಗಲಿದೆ ಎಂದೂ ಮೂಲಗಳುಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರೈತರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕಂಡುಕೊಳ್ಳಲು ಮತ್ತು ಪ್ರಗತಿಪರ ರೈತರ ಸಾಧನೆಗಳನ್ನು ಇತರರಿಗೂ ಪ್ರೇರಣೆಯಾಗಿಸುವ ಉದ್ದೇಶದಿಂದ ‘ರೈತ ವಾಸ್ತವ್ಯ’ ಕಾರ್ಯಕ್ರಮ ಹಮ್ಮಿಕೊಳ್ಳಲು ಕೃಷಿ ಸಚಿವ ಬಿ.ಸಿ. ಪಾಟೀಲ ಮುಂದಾಗಿದ್ದಾರೆ.</p>.<p>‘ಇಂಥದ್ದೊಂದು ಕಾರ್ಯಕ್ರಮಕ್ಕೆ ಸಚಿವರು ಈ ಹಿಂದೆಯೇ ಚಿಂತನೆ ನಡೆಸಿದ್ದರು. ಚಾಮರಾಜನಗರ ಜಿಲ್ಲೆಯ ರೈತರೊಬ್ಬರ ಮನೆಯಲ್ಲಿ ವಾಸ್ತವ್ಯ ಹೂಡಿ, ಸಮಸ್ಯೆಗಳಿಗೆ ಧ್ವನಿಯಾಗಲು ನಿರ್ಧರಿಸಿದ್ದರು. ಆದರೆ, ಕೋವಿಡ್ನಿಂದಾಗಿ ಯೋಜನೆ ಯನ್ನು ಕಾರ್ಯಗತಗೊಳಿಸಲು ಸಾಧ್ಯವಾಗಿರಲಿಲ್ಲ. ಇದೀಗ ಮತ್ತೆ ಈ ಬಗ್ಗೆ ಚಿಂತನೆ ನಡೆಸಿದ್ದಾರೆ’ ಎಂದು ಸಚಿವರ ಆಪ್ತ ಮೂಲಗಳು ತಿಳಿಸಿವೆ.</p>.<p>ಸಚಿವರು ಇಲಾಖೆಯ ಅಧಿಕಾರಿಗಳೊಂದಿಗೆ ರೈತರ ಮನೆಗಳಿಗೆ ತೆರಳಿ, ಅಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ರೈತನ ಕುಟುಂಬ ಮತ್ತು ಸುತ್ತಲಿನ ರೈತರ ಜತೆಗೆ ಕಾಲ ಕಳೆಯುವ ಮೂಲಕ ಕೃಷಿ ವಿಚಾರಗಳ ಬಗ್ಗೆ ಚರ್ಚಿಸುವುದು ಕಾರ್ಯಕ್ರಮದ ಉದ್ದೇಶ.</p>.<p>ಆ ಮೂಲಕ, ಕೃಷಿ ಉತ್ಪನ್ನಗಳ ಇಳುವರಿ ಹೆಚ್ಚಿಸುವುದು, ಉತ್ತಮ ಬೆಲೆ ಸಿಗುವಂತೆ ಮಾಡಲು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಲಹೆ ಸೂಚನೆಗಳನ್ನು ಪಡೆಯಲಿದ್ದಾರೆ. ಕೊರೊನಾ ಸೋಂಕು ಕಡಿಮೆಯಾದ ಬಳಿಕ ರೈತ ವಾಸ್ತವ್ಯದ ರೂಪುರೇಷೆ ಮತ್ತು ದಿನಾಂಕವೂ ನಿಗದಿಯಾಗಲಿದೆ ಎಂದೂ ಮೂಲಗಳುಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>