<p><strong>ಬೆಂಗಳೂರು</strong>: ನನ್ನ ರಾಜ್ಯೋತ್ಸವದಂದು ಕನ್ನಡ ಮಕ್ಕಳಿಗೆ ಶುಭಾಶಯಗಳು...</p>.<p>ಹೀಗೆಂದು ಸೂಪರ್ ಸ್ಟಾರ್ ರಜನಿಕಾಂತ್ ಅವರು 67 ನೇ ರಾಜ್ಯೋತ್ಸವದಂದುಕನ್ನಡಿಗರಿಗೆ ವಿಧಾನಸೌಧದ ಮುಂದೆ ನಿಂತು ಶುಭ ಕೋರಿದರು.ಅವರು ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ರಜನಿಕಾಂತ್ ಅವರು ಮಳೆಯಲ್ಲಿಯೇ ಮಾತನಾಡಿದರು.</p>.<p><strong>ಅಪ್ಪು ದೇವರ ಮಗು: ರಜನಿಕಾಂತ್</strong></p>.<p>‘ಡಾ.ರಾಜ್ಕುಮಾರ್ ಸೇರಿದಂತೆ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರಾಗಿರುವ ಉಳಿದ ಎಲ್ಲರೂ 70 ವರ್ಷಗಳಲ್ಲಿ ಮಾಡಿರುವ ಸಾಧನೆಯನ್ನು ನಮ್ಮ ಪ್ರೀತಿಯ ಪುನೀತ್ ರಾಜ್ಕುಮಾರ್ 21 ವರ್ಷಗಳಲ್ಲೇ ಮಾಡಿ ಹೋಗಿದ್ದಾನೆ’ ಎಂದು ನಟ ರಜನಿಕಾಂತ್ ಹೇಳಿದರು.</p>.<p>ಕನ್ನಡದಲ್ಲೇ ಮಾತನಾಡಿದ ಅವರು, ‘ಮಾರ್ಕಂಡೇಯ, ಪ್ರಹ್ಲಾದ, ನಚಿಕೇತ ನಂತೆ ಕಲಿಯುಗದಲ್ಲಿ ಈ ಅಪ್ಪು. ಅವನು ದೇವರ ಒಬ್ಬ ಮಗು. ಸ್ವಲ್ಪ ದಿನ ಇಲ್ಲಿಗೆ ಬಂದು ನಮ್ಮ ಜತೆ ಇದ್ದು ಆಟವಾಡಿ, ತನ್ನಲ್ಲಿ ಇರುವುದನ್ನೆಲ್ಲ ತೋರಿಸಿ ದೇವರ ಹತ್ತಿರ ಹೋಗಿದ್ದಾನೆ. ಅವನ ಆತ್ಮ ಇಲ್ಲೇ ನಮ್ಮ ಸುತ್ತವೇ ಇದೆ. ಬಹಳ ದೊಡ್ಡ ಜೀವ ಅದು’ ಎಂದರು.</p>.<p>ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಮಳೆ ಕೊಂಚ ಕಡಿಮೆಯಾಗಿದ್ದನ್ನು ಗಮನಿಸಿದ ರಜನಿಕಾಂತ್ ಮತ್ತೆ ಮಾತಿಗಿಳಿದರು. ಪುನೀತ್ ಅವರು 4 ವರ್ಷಗಳ ಪುಟ್ಟ ಮಗುವಾಗಿ ಪರಿಚಯವಾದದ್ದು, ಅವರ ಬೆಳವಣಿಗೆಯನ್ನು ಸ್ಮರಿಸಿದರು.</p>.<p>ರಾಜ್ ಅವರು ಪ್ರತಿವರ್ಷ ಶಬರಿಮಲೆಗೆ ಹೋಗುತ್ತಿದ್ದರು. 48 ಕಿ.ಮೀ ದೂರ ಅಪ್ಪುವನ್ನು ಹೆಗಲ ಮೇಲೆಯೇ ಕೂರಿಸಿಕೊಂಡು ನಡೆದೇ ಹೋಗುತ್ತಿದ್ದರು.</p>.<p>ಇರುಮುಡಿ ಕಟ್ಟಿದ ಬಳಿಕ ಶಬರಿಮಲೆಗೆ ಹೊರಡುವ ಮುನ್ನ ಯಾವಾಗಲೂ ಖ್ಯಾತಗಾಯಕ ವೀರಮಣಿ ಅವರು ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಭಜನೆ ಆರಂಭಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನನ್ನ ರಾಜ್ಯೋತ್ಸವದಂದು ಕನ್ನಡ ಮಕ್ಕಳಿಗೆ ಶುಭಾಶಯಗಳು...</p>.<p>ಹೀಗೆಂದು ಸೂಪರ್ ಸ್ಟಾರ್ ರಜನಿಕಾಂತ್ ಅವರು 67 ನೇ ರಾಜ್ಯೋತ್ಸವದಂದುಕನ್ನಡಿಗರಿಗೆ ವಿಧಾನಸೌಧದ ಮುಂದೆ ನಿಂತು ಶುಭ ಕೋರಿದರು.ಅವರು ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ರಜನಿಕಾಂತ್ ಅವರು ಮಳೆಯಲ್ಲಿಯೇ ಮಾತನಾಡಿದರು.</p>.<p><strong>ಅಪ್ಪು ದೇವರ ಮಗು: ರಜನಿಕಾಂತ್</strong></p>.<p>‘ಡಾ.ರಾಜ್ಕುಮಾರ್ ಸೇರಿದಂತೆ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರಾಗಿರುವ ಉಳಿದ ಎಲ್ಲರೂ 70 ವರ್ಷಗಳಲ್ಲಿ ಮಾಡಿರುವ ಸಾಧನೆಯನ್ನು ನಮ್ಮ ಪ್ರೀತಿಯ ಪುನೀತ್ ರಾಜ್ಕುಮಾರ್ 21 ವರ್ಷಗಳಲ್ಲೇ ಮಾಡಿ ಹೋಗಿದ್ದಾನೆ’ ಎಂದು ನಟ ರಜನಿಕಾಂತ್ ಹೇಳಿದರು.</p>.<p>ಕನ್ನಡದಲ್ಲೇ ಮಾತನಾಡಿದ ಅವರು, ‘ಮಾರ್ಕಂಡೇಯ, ಪ್ರಹ್ಲಾದ, ನಚಿಕೇತ ನಂತೆ ಕಲಿಯುಗದಲ್ಲಿ ಈ ಅಪ್ಪು. ಅವನು ದೇವರ ಒಬ್ಬ ಮಗು. ಸ್ವಲ್ಪ ದಿನ ಇಲ್ಲಿಗೆ ಬಂದು ನಮ್ಮ ಜತೆ ಇದ್ದು ಆಟವಾಡಿ, ತನ್ನಲ್ಲಿ ಇರುವುದನ್ನೆಲ್ಲ ತೋರಿಸಿ ದೇವರ ಹತ್ತಿರ ಹೋಗಿದ್ದಾನೆ. ಅವನ ಆತ್ಮ ಇಲ್ಲೇ ನಮ್ಮ ಸುತ್ತವೇ ಇದೆ. ಬಹಳ ದೊಡ್ಡ ಜೀವ ಅದು’ ಎಂದರು.</p>.<p>ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಮಳೆ ಕೊಂಚ ಕಡಿಮೆಯಾಗಿದ್ದನ್ನು ಗಮನಿಸಿದ ರಜನಿಕಾಂತ್ ಮತ್ತೆ ಮಾತಿಗಿಳಿದರು. ಪುನೀತ್ ಅವರು 4 ವರ್ಷಗಳ ಪುಟ್ಟ ಮಗುವಾಗಿ ಪರಿಚಯವಾದದ್ದು, ಅವರ ಬೆಳವಣಿಗೆಯನ್ನು ಸ್ಮರಿಸಿದರು.</p>.<p>ರಾಜ್ ಅವರು ಪ್ರತಿವರ್ಷ ಶಬರಿಮಲೆಗೆ ಹೋಗುತ್ತಿದ್ದರು. 48 ಕಿ.ಮೀ ದೂರ ಅಪ್ಪುವನ್ನು ಹೆಗಲ ಮೇಲೆಯೇ ಕೂರಿಸಿಕೊಂಡು ನಡೆದೇ ಹೋಗುತ್ತಿದ್ದರು.</p>.<p>ಇರುಮುಡಿ ಕಟ್ಟಿದ ಬಳಿಕ ಶಬರಿಮಲೆಗೆ ಹೊರಡುವ ಮುನ್ನ ಯಾವಾಗಲೂ ಖ್ಯಾತಗಾಯಕ ವೀರಮಣಿ ಅವರು ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಭಜನೆ ಆರಂಭಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>