<p><strong>ಬೆಂಗಳೂರು</strong>: ‘ಇನ್ನೂ ಕೆಲವರನ್ನು ಉಪ ಮುಖ್ಯಮಂತ್ರಿ ಮಾಡಬೇಕೆಂಬ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಉದ್ದೇಶ ಒಳ್ಳೆಯದು. ಆದರೆ, ಅದನ್ನು ಮಾಡುವುದು, ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>ರಾಜಣ್ಣ ಹೇಳಿಕೆಯನ್ನು ಸಮರ್ಥಿಸಿ ಮಾತನಾಡಿದ ಅವರು, ‘ರಾಜಣ್ಣ ಕೇಳುವುದರಲ್ಲಿ ತಪ್ಪೇನೂ ಇಲ್ಲ. ಮುಖ್ಯಮಂತ್ರಿ ಹಾಗೂ ಹೈಕಮಾಂಡ್ಗೂ ಈ ಬಗ್ಗೆ ಅವರೇ ತಿಳಿಸಬೇಕು. ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದರೂ ಉದ್ದೇಶ ಒಳ್ಳೆಯದಿದೆ’ ಎಂದರು.</p>.<p>‘ಲೋಕಸಭೆ ಚುನಾವಣೆಗೆ ಮೊದಲು ಎಲ್ಲ ಸಮುದಾಯಗಳಿಗೂ ಅವಕಾಶ ನೀಡುವಂತೆ ಕೇಳಿದ್ದಾರೆ. ಆದರೆ, ಈ ಬಗ್ಗೆ ತೀರ್ಮಾನ ಮಾಡುವವರು, ಬಿಡುವವರು ಎಐಸಿಸಿ ನಾಯಕರು. ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದೂ ಹೇಳಿದರು.</p>.<p>ತನಿಖೆ ಬಳಿಕ ಎಲ್ಲ ಲಿಂಕ್ ಹೊರಬರಲಿದೆ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸಲು ಹಣ ಪಡೆದಿರುವ ಆರೋಪದ ಮೇಲೆ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ಹಲವರ ಬಂಧನವಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪರಮೇಶ್ವರ, ‘ ಅವರೇ ಹಣ ತೆಗೆದುಕೊಂಡಿದ್ದಾರಾ? ಬೇರೆಯವರಿಗೆ ಕೊಟ್ಟಿದ್ದರಾ? ಯಾರೆಲ್ಲಾ ಇದರಲ್ಲಿದ್ದಾರೆ ಎಂಬುದು ತನಿಖೆಯ ಬಳಿಕ ಬಯಲಾಗಲಿದೆ’ ಎಂದರು.</p>.<p>‘ಚೈತ್ರಾ ಕುಂದಾಪುರ ಅವರ ವಿಚಾರದಲ್ಲಿ ಸ್ವಲ್ಪ ಡ್ರಾಮಾ ನಡೆದಿದೆ. ಇಲಾಖೆಯವರು ಸೂಕ್ತವಾಗಿ ನಿಭಾಯಿಸುತ್ತಿದ್ದಾರೆ. ತನಿಖೆ ನಡೆದು ಎಲ್ಲ ಮಾಹಿತಿ ಹೊರಬರಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಇನ್ನೂ ಕೆಲವರನ್ನು ಉಪ ಮುಖ್ಯಮಂತ್ರಿ ಮಾಡಬೇಕೆಂಬ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಉದ್ದೇಶ ಒಳ್ಳೆಯದು. ಆದರೆ, ಅದನ್ನು ಮಾಡುವುದು, ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>ರಾಜಣ್ಣ ಹೇಳಿಕೆಯನ್ನು ಸಮರ್ಥಿಸಿ ಮಾತನಾಡಿದ ಅವರು, ‘ರಾಜಣ್ಣ ಕೇಳುವುದರಲ್ಲಿ ತಪ್ಪೇನೂ ಇಲ್ಲ. ಮುಖ್ಯಮಂತ್ರಿ ಹಾಗೂ ಹೈಕಮಾಂಡ್ಗೂ ಈ ಬಗ್ಗೆ ಅವರೇ ತಿಳಿಸಬೇಕು. ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದರೂ ಉದ್ದೇಶ ಒಳ್ಳೆಯದಿದೆ’ ಎಂದರು.</p>.<p>‘ಲೋಕಸಭೆ ಚುನಾವಣೆಗೆ ಮೊದಲು ಎಲ್ಲ ಸಮುದಾಯಗಳಿಗೂ ಅವಕಾಶ ನೀಡುವಂತೆ ಕೇಳಿದ್ದಾರೆ. ಆದರೆ, ಈ ಬಗ್ಗೆ ತೀರ್ಮಾನ ಮಾಡುವವರು, ಬಿಡುವವರು ಎಐಸಿಸಿ ನಾಯಕರು. ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದೂ ಹೇಳಿದರು.</p>.<p>ತನಿಖೆ ಬಳಿಕ ಎಲ್ಲ ಲಿಂಕ್ ಹೊರಬರಲಿದೆ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸಲು ಹಣ ಪಡೆದಿರುವ ಆರೋಪದ ಮೇಲೆ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ಹಲವರ ಬಂಧನವಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪರಮೇಶ್ವರ, ‘ ಅವರೇ ಹಣ ತೆಗೆದುಕೊಂಡಿದ್ದಾರಾ? ಬೇರೆಯವರಿಗೆ ಕೊಟ್ಟಿದ್ದರಾ? ಯಾರೆಲ್ಲಾ ಇದರಲ್ಲಿದ್ದಾರೆ ಎಂಬುದು ತನಿಖೆಯ ಬಳಿಕ ಬಯಲಾಗಲಿದೆ’ ಎಂದರು.</p>.<p>‘ಚೈತ್ರಾ ಕುಂದಾಪುರ ಅವರ ವಿಚಾರದಲ್ಲಿ ಸ್ವಲ್ಪ ಡ್ರಾಮಾ ನಡೆದಿದೆ. ಇಲಾಖೆಯವರು ಸೂಕ್ತವಾಗಿ ನಿಭಾಯಿಸುತ್ತಿದ್ದಾರೆ. ತನಿಖೆ ನಡೆದು ಎಲ್ಲ ಮಾಹಿತಿ ಹೊರಬರಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>