<p><strong>ಬೆಂಗಳೂರು</strong>: 'ಮೈಸೂರಿನ ಉದಯಗಿರಿ ಗಲಭೆ ಪ್ರಕರಣಕ್ಕೆ ಪೊಲೀಸರೇ ಕಾರಣ. ಕಲ್ಲು ತೂರಾಟ ಪ್ರಕರಣದಲ್ಲಿ ಸ್ಥಳೀಯ ಪೊಲೀಸರು ಕರ್ತವ್ಯ ಲೋಪ ಎಸಗಿದ್ದಾರೆ’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ದೂರಿದ್ದಾರೆ.</p>.<p>ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸರು ಕನಿಷ್ಠ ಪ್ರಜ್ಞೆ ಇಲ್ಲದಂತೆ ವರ್ತಿಸಿದ್ದಾರೆ ಎಂದು ಕಿಡಿಕಾರಿದರು.</p>.<p>‘ಆರ್ಎಸ್ಎಸ್ ವ್ಯಕ್ತಿ ಧರ್ಮನಿಂದನೆ ಕೃತ್ಯ ಮಾಡಿದ್ದಾನೆ. ಅವನ ಮೇಲೆ ಪ್ರಕರಣ ದಾಖಲು ಮಾಡಿ ಬಂಧಿಸಲಾಗಿದೆ. ಆರೋಪಿಯನ್ನು ಶೇ 99 ರಷ್ಟು ಮುಸ್ಲಿಮರೇ ಇರುವ ಉದಯಗಿರಿ ಬಡಾವಣೆಯ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಸಹಜವಾಗಿ ಜನ ಒಟ್ಟಾಗಿ ಸೇರಿದ್ದಾರೆ. ಗಲಾಟೆ ಮಾಡಿದ್ದಾರೆ’ ಎಂದು ತಿಳಿಸಿದರು.</p>.<p>‘ಆಡಳಿತ ನಡೆಸುವುದು ಸಚಿವರ ಜವಾಬ್ದಾರಿ ಮಾತ್ರವಲ್ಲ. ಅಧಿಕಾರಿಗಳಿಗೂ ಜವಾಬ್ದಾರಿ ಇದೆ. ಪೊಲೀಸರಿಗೆ ತಲೆಯಲ್ಲಿ ಬುದ್ಧಿ ಇಲ್ಲವೇ? ರಸ್ತೆಯಲ್ಲಿ ಹೋಗುವ ಕೆಲಸಕ್ಕೆ ಬಾರದ ಅನಾಮಧೇಯ ವ್ಯಕ್ತಿಗಿರುವ ಸಾಮಾನ್ಯ ಜ್ಞಾನ ದೊಡ್ಡ ಬ್ಯಾಡ್ಜ್ ಹಾಕಿಕೊಂಡು ತಿರುಗುವ ಅಧಿಕಾರಿಗಳಿಗಿಲ್ಲ’ ಎಂದು ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ಮೈಸೂರಿನ ಉದಯಗಿರಿ ಗಲಭೆ ಪ್ರಕರಣಕ್ಕೆ ಪೊಲೀಸರೇ ಕಾರಣ. ಕಲ್ಲು ತೂರಾಟ ಪ್ರಕರಣದಲ್ಲಿ ಸ್ಥಳೀಯ ಪೊಲೀಸರು ಕರ್ತವ್ಯ ಲೋಪ ಎಸಗಿದ್ದಾರೆ’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ದೂರಿದ್ದಾರೆ.</p>.<p>ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸರು ಕನಿಷ್ಠ ಪ್ರಜ್ಞೆ ಇಲ್ಲದಂತೆ ವರ್ತಿಸಿದ್ದಾರೆ ಎಂದು ಕಿಡಿಕಾರಿದರು.</p>.<p>‘ಆರ್ಎಸ್ಎಸ್ ವ್ಯಕ್ತಿ ಧರ್ಮನಿಂದನೆ ಕೃತ್ಯ ಮಾಡಿದ್ದಾನೆ. ಅವನ ಮೇಲೆ ಪ್ರಕರಣ ದಾಖಲು ಮಾಡಿ ಬಂಧಿಸಲಾಗಿದೆ. ಆರೋಪಿಯನ್ನು ಶೇ 99 ರಷ್ಟು ಮುಸ್ಲಿಮರೇ ಇರುವ ಉದಯಗಿರಿ ಬಡಾವಣೆಯ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಸಹಜವಾಗಿ ಜನ ಒಟ್ಟಾಗಿ ಸೇರಿದ್ದಾರೆ. ಗಲಾಟೆ ಮಾಡಿದ್ದಾರೆ’ ಎಂದು ತಿಳಿಸಿದರು.</p>.<p>‘ಆಡಳಿತ ನಡೆಸುವುದು ಸಚಿವರ ಜವಾಬ್ದಾರಿ ಮಾತ್ರವಲ್ಲ. ಅಧಿಕಾರಿಗಳಿಗೂ ಜವಾಬ್ದಾರಿ ಇದೆ. ಪೊಲೀಸರಿಗೆ ತಲೆಯಲ್ಲಿ ಬುದ್ಧಿ ಇಲ್ಲವೇ? ರಸ್ತೆಯಲ್ಲಿ ಹೋಗುವ ಕೆಲಸಕ್ಕೆ ಬಾರದ ಅನಾಮಧೇಯ ವ್ಯಕ್ತಿಗಿರುವ ಸಾಮಾನ್ಯ ಜ್ಞಾನ ದೊಡ್ಡ ಬ್ಯಾಡ್ಜ್ ಹಾಕಿಕೊಂಡು ತಿರುಗುವ ಅಧಿಕಾರಿಗಳಿಗಿಲ್ಲ’ ಎಂದು ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>