ಕಾಂಗ್ರೆಸ್ 135 ಶಾಸಕರ ಬಲವನ್ನು ಹೊಂದಿದೆ. ಬಿಜೆಪಿ 66, ಜೆಡಿಎಸ್ 19, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜನಾರ್ದನ ರೆಡ್ಡಿ, ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಮತ್ತು ಪಕ್ಷೇತರರಾದ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್ ಮತ್ತು ಗೌರಿಬಿದನೂರು ಶಾಸಕ ಕೆ.ಪಿ.ಪುಟ್ಟಸ್ವಾಮಿ ಇದ್ದಾರೆ. ದರ್ಶನ್, ಲತಾ, ಪುಟ್ಟಸ್ವಾಮಿ ಕಾಂಗ್ರೆಸ್ ಜತೆ ಗುರುತಿಸಿಕೊಂಡವರು. ಜನಾರ್ದನ ರೆಡ್ಡಿ ಸಹ ಆರಂಭದಲ್ಲಿ ಕಾಂಗ್ರೆಸ್ ಜತೆಗಿರುವುದಾಗಿ ಹೇಳಿದ್ದರು. ಇತ್ತೀಚೆಗೆ, ಬಿಜೆಪಿ ಕಡೆ ಒಲವು ತೋರಿದ್ದಾರೆ.