ನೆಹರೂ, ರಾಜಗೋಪಾಲಾಚಾರಿ, ಕೆಂಗಲ್ ಹನುಮಂತಯ್ಯ, ಬಿ.ಡಿ. ಜತ್ತಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಹಲವು ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ರಾಷ್ಟ್ರಮಟ್ಟಕ್ಕೆ ಬೆಳೆದಿದ್ದಾರೆ. ಅದಕ್ಕಾಗಿ ಪಕ್ಷದ ಸಂಘಟನೆ ಬಲಗೊಳಿಸಬೇಕು. ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿ, ಹೊಸದಾಗಿ ರಚಿಸುವ ಸಮಯ ಬಂದಿದೆ ಎಂದು ಹೇಳಿದರು.