<p><strong>ಚಿಂತಾಮಣಿ</strong>: ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಧಮ್ಕಿ ಹಾಕಿ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಲ್ಲಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶನಿವಾರ ವಜಾಗೊಳಿಸಿದೆ.</p>.<p>ರಾಜೀವ್ ಗೌಡ ಜ.17ರಂದು ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಪ್ರಭಾರ ನ್ಯಾಯಾಧೀಶ ಕಾಂತರಾಜು ಜ. 22ರಂದು ವಿಚಾರಣೆ ಮುಗಿಸಿ, 24ರಂದು ತೀರ್ಪು ಕಾಯ್ದಿರಿಸಿದ್ದರು. </p>.<p>ರಾಜೀವ್ ಗೌಡ ಪರ ವಿವೇಕ ರೆಡ್ಡಿ ವಾದ ಮಂಡಿಸಿದರೆ, ಸರ್ಕಾರಿ ಅಭಿಯೋಜಕಿ ಸುಮತಿ ಶಾಂತಾ ಮೇರಿ ಜಾಮೀನು ಅರ್ಜಿ ವಿರೋಧಿಸಿ ವಾದ ಮಾಡಿದ್ದರು.</p>.<p>ಪೌರಾಯುಕ್ತೆ ಜಿ. ಅಮೃತ ಗೌಡ ಅವರು ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಬಿಎನ್ಎಸ್ ಸೆಕ್ಷನ್ 132, 224, 352, 351(3) ಮತ್ತು 56ರ ಅಡಿ ಎಫ್ಐಅರ್ ದಾಖಲಿಸಿದ್ದರು.</p>.<p>ಬಂಧನದಿಂದ ತಪ್ಪಿಸಿಕೊಳ್ಳಲು ರಾಜೀವ್ ಗೌಡ ತಲೆ ಮರೆಸಿಕೊಂಡಿದ್ದು, ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಧಮ್ಕಿ ಹಾಕಿ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಲ್ಲಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶನಿವಾರ ವಜಾಗೊಳಿಸಿದೆ.</p>.<p>ರಾಜೀವ್ ಗೌಡ ಜ.17ರಂದು ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಪ್ರಭಾರ ನ್ಯಾಯಾಧೀಶ ಕಾಂತರಾಜು ಜ. 22ರಂದು ವಿಚಾರಣೆ ಮುಗಿಸಿ, 24ರಂದು ತೀರ್ಪು ಕಾಯ್ದಿರಿಸಿದ್ದರು. </p>.<p>ರಾಜೀವ್ ಗೌಡ ಪರ ವಿವೇಕ ರೆಡ್ಡಿ ವಾದ ಮಂಡಿಸಿದರೆ, ಸರ್ಕಾರಿ ಅಭಿಯೋಜಕಿ ಸುಮತಿ ಶಾಂತಾ ಮೇರಿ ಜಾಮೀನು ಅರ್ಜಿ ವಿರೋಧಿಸಿ ವಾದ ಮಾಡಿದ್ದರು.</p>.<p>ಪೌರಾಯುಕ್ತೆ ಜಿ. ಅಮೃತ ಗೌಡ ಅವರು ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಬಿಎನ್ಎಸ್ ಸೆಕ್ಷನ್ 132, 224, 352, 351(3) ಮತ್ತು 56ರ ಅಡಿ ಎಫ್ಐಅರ್ ದಾಖಲಿಸಿದ್ದರು.</p>.<p>ಬಂಧನದಿಂದ ತಪ್ಪಿಸಿಕೊಳ್ಳಲು ರಾಜೀವ್ ಗೌಡ ತಲೆ ಮರೆಸಿಕೊಂಡಿದ್ದು, ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>