ಆರೋಪಿಗಳಾದ ವೀರಪ್ಪನ್ ಮತ್ತು ಆತನ ಸಹಚರರಾದ ಸೇತುಕುಳಿ ಗೋವಿಂದನ್, ರಂಗಸ್ವಾಮಿ ಸೇರಿ ಒಟ್ಟು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇವರಲ್ಲಿ ವೀರಪ್ಪನ್, ಗೋವಿಂದನ್ ಮತ್ತು ರಂಗಸ್ವಾಮಿ ಈಗಾಗಲೇ ಮೃತಪಟ್ಟಿದ್ದಾರೆ. ಉಳಿದ ಐವರು ಜೈಲಿನಲ್ಲಿದ್ದಾರೆ. ತೀರ್ಪನ್ನು ಈರೋಡ್ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಕೆ.ಮಣಿ ನೀಡಲಿದ್ದಾರೆ.