ಆದರೆ, ತಮ್ಮ ಅಭ್ಯರ್ಥಿ ಕಣದಲ್ಲೇ ಉಳಿಯುತ್ತಾರೆ ಎನ್ನುವ ಮೂಲಕ ಕಾಂಗ್ರೆಸ್ ಬೇಡಿಕೆಗೆ ಮಣಿಯುವುದಿಲ್ಲ ಎಂಬ ಸಂದೇಶ ರವಾನಿಸಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ, ಎರಡೂ ಪಕ್ಷಗಳ ಶಾಸಕರ ಎರಡನೇ ಪ್ರಾಶಸ್ತ್ಯದ ಮತಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುವ ಪ್ರಸ್ತಾವ ಮುಂದಿಟ್ಟಿದ್ದಾರೆ.