ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆ ಚುನಾವಣೆ: ಮತದಾನಕ್ಕೆ ಗೈರಾದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್!

ಯಲ್ಲಾಪುರ ಬಿಜೆಪಿ ಶಾಸಕ ಅರಬೈಲ್‌ ಶಿವರಾಂ ಹೆಬ್ಬಾರ್‌
Published 27 ಫೆಬ್ರುವರಿ 2024, 11:07 IST
Last Updated 27 ಫೆಬ್ರುವರಿ 2024, 11:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಯಲ್ಲಾಪುರ ಬಿಜೆಪಿ ಶಾಸಕ ಅರಬೈಲ್‌ ಶಿವರಾಂ ಹೆಬ್ಬಾರ್‌ ಮತದಾನಕ್ಕೆ ಗೈರಾದರು. ಉಳಿದ 222 ಶಾಸಕರು ಮತ ಚಲಾಯಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಆರಂಭವಾದ ಮತದಾನ ಸಂಜೆ 4 ಗಂಟೆಯವರೆಗೂ ನಡೆಯಿತು. ಕಾಂಗ್ರೆಸ್‌ನ 134, ಬಿಜೆಪಿಯ 65, ಜೆಡಿಎಸ್‌ನ 19, ಇಬ್ಬರು ಪಕ್ಷೇತರರು, ಸರ್ವೋದಯ ಕರ್ನಾಟಕ ಪಕ್ಷ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ತಲಾ ಒಬ್ಬರು ಮತ ಚಲಾಯಿಸಿದರು.

ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಅಡ್ಡ ಮತದಾನ ಮಾಡಿರುವುದನ್ನು ಬಿಜೆಪಿಯ ಚುನಾವಣಾ ಏಜೆಂಟರು ಖಚಿತಪಡಿಸಿದ್ದಾರೆ. ಶಿವರಾಂ ಹೆಬ್ಬಾರ್‌ ಮತದಾನದಿಂದ ದೂರ ಉಳಿದರು. ಇದರಿಂದಾಗಿ ಬಿಜೆಪಿಯ ಎರಡು ಮತಗಳು ಕೈತಪ್ಪಿವೆ.

ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಬಹುತೇಕ ಶಾಸಕರು ಮತ ಚಲಾಯಿಸಿದ್ದರು. ಶಿವರಾಂ ಹೆಬ್ಬಾರ್‌ ಮತ್ತು ಹನೂರು ಕ್ಷೇತ್ರದ ಜೆಡಿಎಸ್‌ ಶಾಸಕ ಎಂ.ಆರ್‌. ಮಂಜುನಾಥ್‌ ಮತ ಚಲಾಯಿಸುವುದು ಬಾಕಿ ಇತ್ತು. ಮಂಜುನಾಥ್‌ ಕೊನೆಯವರಾಗಿ ಮತ ಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT