ಆರ್ಎಸ್ಎಸ್ ಹಾಗೂ ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು
ನಾರಾಯಣಸಾ ಕೃಷ್ಣಸಾ ಭಾಂಡಗೆ ಅವರು ಆರ್ಎಸ್ಎಸ್ ಹಾಗೂ ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು. ನಂತರ ಬಿಜೆಪಿ ಮೂಲಕ ರಾಜಕೀಯ ಪ್ರವೇಶಿಸಿದ್ದ ನಾರಾಯಣ ಕೃಷ್ಣಸಾ ಭಾಂಡಗೆ ಅವರು ಬಾಗಲಕೋಟೆ ಜಿಲ್ಲೆಯವರು. ಪಕ್ಷದ ಬಾಗಲಕೋಟೆ ಜಿಲ್ಲಾ ಘಟಕ ಮತ್ತು ರಾಜ್ಯ ಘಟಕದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ವಿಧಾನಪರಿಷತ್ತಿಗೆ ಒಂದು ಅವಧಿಗೆ ವಿಧಾನಸಭೆಯಿಂದ ಆಯ್ಕೆ ಆಗಿದ್ದರು.