ಮಂಗಳೂರು: ಅಶೋಕ ಗಸ್ತಿ ನಿಧನದಿಂದ ತೆರವಾಗಿರುವ ರಾಜ್ಯಸಭಾ ಸ್ಥಾನಕ್ಕೆ ಅವರ ಪತ್ನಿಗೆ ಟಿಕೆಟ್ ನೀಡಲುಬಿಜೆಪಿ ರಾಜ್ಯ ಕೋರ್ ಕಮಿಟಿಯ ಬಹುತೇಕ ಸದಸ್ಯರು ಒಲವು ಹೊಂದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
‘ರಾಜ್ಯಸಭೆಗೆ ಹಲವಾರು ಆಕಾಂಕ್ಷಿಗಳಿದ್ದು, ನಾಲ್ವರ ಹೆಸರನ್ನು ಕೇಂದ್ರ ಸಮಿತಿಗೆ ಶಿಫಾರಸು ಮಾಡಲು ಗುರು ವಾರ ನಡೆದ ಕೋರ್ ಕಮಿಟಿ ಸಭೆ ನಿರ್ಧರಿಸಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.