ಬಾಗಲಕೋಟೆ: ‘ಕಲಿತ್ತ ಹುಡುಗಿ ಕುದರೆ ನಡಗಿ, ಕಡ್ಲಿಮಟ್ಟಿ ಕಾಶಿಬಾಯಿ, ತಾಯಿ ಸತ್ತ ಮೇಲೆ ತವರಿಗೆ ಎಂದು ಹೋಗಬಾರದವ್ವ’ ಮೊದಲಾದ ಜಾನಪದ ಹಾಡುಗಳ ಮೂಲಕ ನಾಡಿನಾದ್ಯಂತ ಮನೆ ಮಾತಾಗಿರುವ ಮುಧೋಳ ತಾಲ್ಲೂಕು ಮಹಾಲಿಂಗಪುರದ ಗಾಯಕ, ನಟ ಗುರುರಾಜ ಹೊಸಕೋಟಿ ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗೌರವ ಸಂದಿದೆ.