ಚಿತ್ರದುರ್ಗ: ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಯಗರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮಂದಿರ ನಿರ್ಮಾಣ ವಿಳಂಬ ಪ್ರಕ್ರಿಯೆ ಸಲ್ಲದು. ಜನವರಿ 30ರಂದು ತೀರ್ಮಾನ ಹೊರಬೀಳಲಿದೆ. 2025ಕ್ಕೆ ಮಂದಿರ ನಿರ್ಮಾಣವಾಗಲಿದೆ ಎಂಬ ಆರ್ಎಸ್ಎಸ್ಮುಖ್ಯಸ್ಥ ಭಯ್ಯಾಜಿ ಜೋಶಿ ಅವರ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ ಎಂದರು.
ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.