ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಣೆಬೆನ್ನೂರು: ಕೇಕ್‌ನಲ್ಲಿ ಅರಳಿದ ರಾಮ ಮಂದಿರ

Published 18 ಜನವರಿ 2024, 6:15 IST
Last Updated 18 ಜನವರಿ 2024, 6:15 IST
ಅಕ್ಷರ ಗಾತ್ರ

ರಾಣೆಬೆನ್ನೂರು (ಹಾವೇರಿ ಜಿಲ್ಲೆ): ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಣೆಬೆನ್ನೂರಿನ ಪ್ರವಾಸಿ ಮಂದಿರದ ಬಳಿ ಇರುವ ಬೇಕರಿ ಸರ್ಕಲ್ ಎಂಬ ಬೇಕರಿಯಲ್ಲಿ ಮಹಾಂತೇಶ್ ಎಂಬ ಯುವಕ 20 ಕೆ.ಜಿ ಶುಗರ್ ಪೇಸ್ಟ್‌ನಿಂದ ಅಯೋಧ್ಯೆಯ ರಾಮ ಮಂದಿರದ ಪ್ರತಿಕೃತಿ ನಿರ್ಮಿಸಿ ಪ್ರದರ್ಶನಕ್ಕೆ ಇಟ್ಟಿದ್ದಾರೆ.

ಅಯೋಧ್ಯೆಯ ರಾಮ ಮಂದಿರದ ಮಾದರಿಯನ್ನೇ ಹೋಲುವ ಈ ಕೇಕ್ ಕಲಾಕೃತಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ.

ಕೇಕ್ ಪ್ರತಿಕೃತಿ ತಯಾರಕ ದಾವಣಗೆರೆ ತಾಲ್ಲೂಕಿನ ಹೊಸೂರು ಗ್ರಾಮದ ಯುವಕ ಮಹಾಂತೇಶ್ ಟಿ. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ಕಳೆದ 15 ವರ್ಷಗಳಿಂದ ವಿವಿಧ ಬಗೆಯ ಕೇಕ್ ತಯಾರಿಸುತ್ತೇನೆ. 20 ಕೆ.ಜಿ ಸಕ್ಕರೆ ಬಳಸಲಾಗಿದೆ. ₹40 ಸಾವಿರ ಖರ್ಚು ಮಾಡಿದ್ದು, ಸತತವಾಗಿ 5 ದಿನಗಳ ಕಾಲ ತಯಾರಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT