<p>ಬೆಂಗಳೂರು: ‘ನೀವು ದುಬಾರಿ ಪ್ರಧಾನಮಂತ್ರಿ. ನಿಮಗಾಗಿಯೇ ಪ್ರತಿನಿತ್ಯ ₹25 ಸಾವಿರ ಖರ್ಚು ಮಾಡಲಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ ಎಂದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ರಾಮಮನೋಹರ ಲೋಹಿಯಾ ಪತ್ರ ಬರೆದಿದ್ದರು. ಅಂತಹ ದಿಟ್ಟ, ನೇರ ನಡೆ, ನುಡಿಯ ವ್ಯಕ್ತಿತ್ವ ಅವರದ್ದು’ ಎಂದು ಹಿರಿಯ ರಾಜಕಾರಣಿ ಎಂ.ಪಿ.ನಾಡಗೌಡ ಮಂಗಳವಾರ ಹೇಳಿದರು.</p>.<p>ಭಾರತ ಯಾತ್ರಾ ಕೇಂದ್ರ, ಲೋಕನಾಯಕ ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆ, ಎಂ.ಪಿ.ಪ್ರಕಾಶ್ ಸಮಾಜಮುಖಿ ಟ್ರಸ್ಟ್ ಹಾಗೂ ಡಾ.ರಾಮಮನೋಹರ ಲೋಹಿಯಾ ಸಮತಾ ವಿಚಾರ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಲೋಹಿಯಾ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಚಿಂತಕ ಕೆ.ಎಸ್.ನಾಗರಾಜ್ ‘ಪ್ರಾದೇಶಿಕ ಭಾಷೆಗೆ ಹೆಚ್ಚಿನ ಮನ್ನಣೆ ನೀಡಬೇಕೆಂದು ಲೋಹಿಯಾ ಅವರು ಆ ಕಾಲದಲ್ಲೇ ಒತ್ತಾಯಿಸಿದ್ದರು. ಆ ಮೂಲಕ ಹಿಂದಿ ಹೇರಿಕೆಯನ್ನು ಬಲವಾಗಿ ವಿರೋಧಿಸಿದ್ದರು. ಅವರು ತಮ್ಮ ಕೊನೆಯ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇಡೀ ಮಾನವ ಕುಲಕ್ಕೆ ಮಾದರಿಯಾಗಿದ್ದರು. ಇಂದಿನ ರಾಜಕಾರಣಿಗಳಿಂದ ಇದನ್ನು ನಿರೀಕ್ಷಿಸಲು ಸಾಧ್ಯವೇ’ ಎಂದು ಪ್ರಶ್ನಿಸಿದರು.</p>.<p>‘ವರ್ಷದಲ್ಲಿ ಕೇವಲ ಒಂದು ದಿನ ಲೋಹಿಯಾ ಅವರನ್ನು ಸ್ಮರಿಸಿದರೆ ಸಾಲದು. ಅವರ ತತ್ವ, ಆದರ್ಶಗಳನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು. ಅದನ್ನು ಮುಂದಿನ ಪೀಳಿಗೆಯವರಿಗೂ ವರ್ಗಾಯಿಸಬೇಕು. ಈ ಉದ್ದೇಶ ಸಾಕಾರಗೊಳ್ಳಬೇಕಾದರೆ ನಾವು ಮೊದಲು ಯುವಕರನ್ನು ಒಗ್ಗೂಡಿಸಬೇಕು. ಅವರ ಮನಸ್ಸಿನಲ್ಲಿ ಸಮಾಜವಾದದ ಬೀಜ ಬಿತ್ತಿ ಅದನ್ನು ಪೋಷಿಸಬೇಕು’ ಎಂದು ಬರಹಗಾರ ಮಂಗಳೂರು ವಿಜಯ ಅಭಿಪ್ರಾಯಪಟ್ಟರು.</p>.<p>ಸಮಾಜವಾದಿ ಚಿಂತಕ ಕಾಳಪ್ಪ ‘ಸರ್ವಾಧಿಕಾರಿ ಶಕ್ತಿಗಳು ಇಂದು ಕೇಕೆ ಹಾಕಿ ನಗುತ್ತಿವೆ. ಅವರ ಅಟ್ಟಹಾಸವನ್ನು ಅಡಗಿಸುವ ಶಕ್ತಿಯನ್ನು ಸಮಾಜವಾದ ಕಳೆದುಕೊಂಡಿಲ್ಲ. ಕಾಲಚಕ್ರ ತಿರುಗುತ್ತಲೇ ಇರುತ್ತದೆ. ನಿರಂಕುಶ ಪ್ರಭುತ್ವ ಕೊನೆಗೊಳ್ಳುವ ಕಾಲ ಸಮೀಪಿಸುತ್ತಿದೆ’ ಎಂದರು.</p>.<p>‘ಲೋಹಿಯಾ ಅವರು ಜಾತಿ ವ್ಯವಸ್ಥೆ ಹಾಗೂ ವರ್ಣ ತಾರತಮ್ಯದ ವಿರುದ್ಧ ದನಿ ಎತ್ತಿದ್ದರು. ರೈತರು ಮತ್ತು ಕಾರ್ಮಿಕರನ್ನು ಒಗ್ಗೂಡಿಸಲು ಶ್ರಮಿಸಿದ್ದರು’ ಎಂದು ಪ್ರದೀಪ್ ವೆಂಕಟ್ ರಾಮ್ ಹೇಳಿದರು.</p>.<p>ಕೆ.ವಿ.ನಾಗರಾಜಮೂರ್ತಿ, ದಯಾನಂದ್ ಕೋಲಾರ, ಟಿ.ಪ್ರಭಾಕರ್, ಅಲಿಬಾಬಾ, ನರೇಂದ್ರ ಹಾಗೂ ಸುಷ್ಮಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ನೀವು ದುಬಾರಿ ಪ್ರಧಾನಮಂತ್ರಿ. ನಿಮಗಾಗಿಯೇ ಪ್ರತಿನಿತ್ಯ ₹25 ಸಾವಿರ ಖರ್ಚು ಮಾಡಲಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ ಎಂದು ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ರಾಮಮನೋಹರ ಲೋಹಿಯಾ ಪತ್ರ ಬರೆದಿದ್ದರು. ಅಂತಹ ದಿಟ್ಟ, ನೇರ ನಡೆ, ನುಡಿಯ ವ್ಯಕ್ತಿತ್ವ ಅವರದ್ದು’ ಎಂದು ಹಿರಿಯ ರಾಜಕಾರಣಿ ಎಂ.ಪಿ.ನಾಡಗೌಡ ಮಂಗಳವಾರ ಹೇಳಿದರು.</p>.<p>ಭಾರತ ಯಾತ್ರಾ ಕೇಂದ್ರ, ಲೋಕನಾಯಕ ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆ, ಎಂ.ಪಿ.ಪ್ರಕಾಶ್ ಸಮಾಜಮುಖಿ ಟ್ರಸ್ಟ್ ಹಾಗೂ ಡಾ.ರಾಮಮನೋಹರ ಲೋಹಿಯಾ ಸಮತಾ ವಿಚಾರ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಲೋಹಿಯಾ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಚಿಂತಕ ಕೆ.ಎಸ್.ನಾಗರಾಜ್ ‘ಪ್ರಾದೇಶಿಕ ಭಾಷೆಗೆ ಹೆಚ್ಚಿನ ಮನ್ನಣೆ ನೀಡಬೇಕೆಂದು ಲೋಹಿಯಾ ಅವರು ಆ ಕಾಲದಲ್ಲೇ ಒತ್ತಾಯಿಸಿದ್ದರು. ಆ ಮೂಲಕ ಹಿಂದಿ ಹೇರಿಕೆಯನ್ನು ಬಲವಾಗಿ ವಿರೋಧಿಸಿದ್ದರು. ಅವರು ತಮ್ಮ ಕೊನೆಯ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇಡೀ ಮಾನವ ಕುಲಕ್ಕೆ ಮಾದರಿಯಾಗಿದ್ದರು. ಇಂದಿನ ರಾಜಕಾರಣಿಗಳಿಂದ ಇದನ್ನು ನಿರೀಕ್ಷಿಸಲು ಸಾಧ್ಯವೇ’ ಎಂದು ಪ್ರಶ್ನಿಸಿದರು.</p>.<p>‘ವರ್ಷದಲ್ಲಿ ಕೇವಲ ಒಂದು ದಿನ ಲೋಹಿಯಾ ಅವರನ್ನು ಸ್ಮರಿಸಿದರೆ ಸಾಲದು. ಅವರ ತತ್ವ, ಆದರ್ಶಗಳನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು. ಅದನ್ನು ಮುಂದಿನ ಪೀಳಿಗೆಯವರಿಗೂ ವರ್ಗಾಯಿಸಬೇಕು. ಈ ಉದ್ದೇಶ ಸಾಕಾರಗೊಳ್ಳಬೇಕಾದರೆ ನಾವು ಮೊದಲು ಯುವಕರನ್ನು ಒಗ್ಗೂಡಿಸಬೇಕು. ಅವರ ಮನಸ್ಸಿನಲ್ಲಿ ಸಮಾಜವಾದದ ಬೀಜ ಬಿತ್ತಿ ಅದನ್ನು ಪೋಷಿಸಬೇಕು’ ಎಂದು ಬರಹಗಾರ ಮಂಗಳೂರು ವಿಜಯ ಅಭಿಪ್ರಾಯಪಟ್ಟರು.</p>.<p>ಸಮಾಜವಾದಿ ಚಿಂತಕ ಕಾಳಪ್ಪ ‘ಸರ್ವಾಧಿಕಾರಿ ಶಕ್ತಿಗಳು ಇಂದು ಕೇಕೆ ಹಾಕಿ ನಗುತ್ತಿವೆ. ಅವರ ಅಟ್ಟಹಾಸವನ್ನು ಅಡಗಿಸುವ ಶಕ್ತಿಯನ್ನು ಸಮಾಜವಾದ ಕಳೆದುಕೊಂಡಿಲ್ಲ. ಕಾಲಚಕ್ರ ತಿರುಗುತ್ತಲೇ ಇರುತ್ತದೆ. ನಿರಂಕುಶ ಪ್ರಭುತ್ವ ಕೊನೆಗೊಳ್ಳುವ ಕಾಲ ಸಮೀಪಿಸುತ್ತಿದೆ’ ಎಂದರು.</p>.<p>‘ಲೋಹಿಯಾ ಅವರು ಜಾತಿ ವ್ಯವಸ್ಥೆ ಹಾಗೂ ವರ್ಣ ತಾರತಮ್ಯದ ವಿರುದ್ಧ ದನಿ ಎತ್ತಿದ್ದರು. ರೈತರು ಮತ್ತು ಕಾರ್ಮಿಕರನ್ನು ಒಗ್ಗೂಡಿಸಲು ಶ್ರಮಿಸಿದ್ದರು’ ಎಂದು ಪ್ರದೀಪ್ ವೆಂಕಟ್ ರಾಮ್ ಹೇಳಿದರು.</p>.<p>ಕೆ.ವಿ.ನಾಗರಾಜಮೂರ್ತಿ, ದಯಾನಂದ್ ಕೋಲಾರ, ಟಿ.ಪ್ರಭಾಕರ್, ಅಲಿಬಾಬಾ, ನರೇಂದ್ರ ಹಾಗೂ ಸುಷ್ಮಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>