<p>ಬೆಂಗಳೂರು: ಬಿಡದಿ ಮತ್ತು ಕಂಚಗಾನಹಳ್ಳಿಯಲ್ಲಿ 9,600 ಎಕರೆ ಜಾಗವನ್ನು ಲೂಟಿ ಮಾಡಲು ಸರ್ಕಾರ ಮುಂದಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಆರೋಪಿಸಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವೆಂದರೆ ಕಾಂಚಾಣದ ಸರ್ಕಾರ ಎಂದರು.</p>.<p>ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಈ ಪ್ರದೇಶದಲ್ಲಿ ತೆಂಗು, ಅಡಿಕೆ, ರೇಷ್ಮೆ ಬೆಳೆಯಲಾಗುತ್ತಿದೆ. ಖಾಸಗಿ, ಸರ್ಕಾರಿ ಸೇರಿದಂತೆ ಸುಮಾರು 7 ಲಕ್ಷ ಫ್ಲ್ಯಾಟ್ಗಳು ಇನ್ನೂ ಖಾಲಿ ಇವೆ. ಈ ಪೈಕಿ 3,000 ಎಕರೆ ಸರ್ಕಾರಿ ಜಮೀನಾಗಿರುವುದರಿಂದ ಆ ಹಣವನ್ನು ಲೂಟಿ ಮಾಡಲು ಯೋಜನೆ ರೂಪಿಸಲಾಗಿದೆ. ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆ ಸ್ಥಗಿತಗೊಳಿಸಿದ್ದರು. ಈಗ ಅದನ್ನೇ ಜಾರಿ ಮಾಡಲಾಗಿದೆ. ಕೃಷಿ ಜಮೀನನ್ನು ವಸತಿಗೆ ಬಳಸಿದರೆ ಆಹಾರ ಕೊರತೆ ಆಗಲಿದೆ ಎಂದು ಹೇಳಿದರು.</p>.<p>ಜಿಬಿಎಗೆ ಕಸ ಮಾಫಿಯಾದಿಂದ ವಾರ್ಷಿಕ ₹700 ಕೋಟಿ ಹೊರೆ ಯಾಗಲಿದೆ. ಟೆಂಡರ್ ಮೊತ್ತ ಏರಿಕೆ ಯಿಂದಾಗಿ ಜನರಿಗೆ ಹೊರೆಯಾಗಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮೊದಲು ಕಸ ತೆಗೆಯುವ ಗ್ಯಾರಂಟಿ ನೀಡಿದರೆ ಸಾಕು ಎಂದು ಅವರು ಕುಟುಕಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-14-1426534567</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಿಡದಿ ಮತ್ತು ಕಂಚಗಾನಹಳ್ಳಿಯಲ್ಲಿ 9,600 ಎಕರೆ ಜಾಗವನ್ನು ಲೂಟಿ ಮಾಡಲು ಸರ್ಕಾರ ಮುಂದಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಆರೋಪಿಸಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವೆಂದರೆ ಕಾಂಚಾಣದ ಸರ್ಕಾರ ಎಂದರು.</p>.<p>ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಈ ಪ್ರದೇಶದಲ್ಲಿ ತೆಂಗು, ಅಡಿಕೆ, ರೇಷ್ಮೆ ಬೆಳೆಯಲಾಗುತ್ತಿದೆ. ಖಾಸಗಿ, ಸರ್ಕಾರಿ ಸೇರಿದಂತೆ ಸುಮಾರು 7 ಲಕ್ಷ ಫ್ಲ್ಯಾಟ್ಗಳು ಇನ್ನೂ ಖಾಲಿ ಇವೆ. ಈ ಪೈಕಿ 3,000 ಎಕರೆ ಸರ್ಕಾರಿ ಜಮೀನಾಗಿರುವುದರಿಂದ ಆ ಹಣವನ್ನು ಲೂಟಿ ಮಾಡಲು ಯೋಜನೆ ರೂಪಿಸಲಾಗಿದೆ. ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆ ಸ್ಥಗಿತಗೊಳಿಸಿದ್ದರು. ಈಗ ಅದನ್ನೇ ಜಾರಿ ಮಾಡಲಾಗಿದೆ. ಕೃಷಿ ಜಮೀನನ್ನು ವಸತಿಗೆ ಬಳಸಿದರೆ ಆಹಾರ ಕೊರತೆ ಆಗಲಿದೆ ಎಂದು ಹೇಳಿದರು.</p>.<p>ಜಿಬಿಎಗೆ ಕಸ ಮಾಫಿಯಾದಿಂದ ವಾರ್ಷಿಕ ₹700 ಕೋಟಿ ಹೊರೆ ಯಾಗಲಿದೆ. ಟೆಂಡರ್ ಮೊತ್ತ ಏರಿಕೆ ಯಿಂದಾಗಿ ಜನರಿಗೆ ಹೊರೆಯಾಗಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮೊದಲು ಕಸ ತೆಗೆಯುವ ಗ್ಯಾರಂಟಿ ನೀಡಿದರೆ ಸಾಕು ಎಂದು ಅವರು ಕುಟುಕಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-14-1426534567</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>