ರಮೇಶ್ ಬಾಬು ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಅವರ ಅಧಿಕಾರ ಅವಧಿ ಎರಡು ವರ್ಷ ಇರಲಿದೆ. ಅವರ ನೇಮಕ ಸಂಬಂಧ ತಕ್ಷಣ ಆದೇಶ ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಬಿ.ಆರ್. ನಾಯ್ಡು ನೇಮಕ: ಕಾಂಗ್ರೆಸ್ ಮುಖಂಡ ಬಿ.ಆರ್. ನಾಯ್ಡು ಅವರನ್ನು ಬಾಲ ಭವನ ಸೊಸೈಟಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ನಾಯ್ಡು ಅವರು ಈ ಹಿಂದೆ ಕೆಪಿಸಿಸಿ ಸಾಮಾಜಿಕ ಜಾಲ ತಾಣದಲ್ಲಿ ಕೆಲಸ ಮಾಡಿದ್ದರು.