<p><strong>ಮೈಸೂರು:</strong> ‘ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ₹ 80 ಕೋಟಿ ನೀಡಿದರೆ ನಿಮ್ಮ ಜತೆ ಇರುವುದಾಗಿ ನನ್ನ ಎದುರಿಗೇ ಹೇಳಿದ್ದರು’ ಎಂದು ಪಿರಿಯಾಪಟ್ಟಣದ ಜೆಡಿಎಸ್ ಶಾಸಕ ಕೆ.ಮಹದೇವ್ ಗಂಭೀರ ಆರೋಪ ಮಾಡಿದ್ದಾರೆ.</p>.<p>ಚಿಟ್ಟೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>‘ಎಲ್ಲ ಶಾಸಕರನ್ನು ಮುಖ್ಯಮಂತ್ರಿ ಒಟ್ಟಿಗೇ ಕರೆದೊಯ್ಯಬೇಕು; ಇಲ್ಲದಿದ್ದರೆ ಹಣದ ಬೇಡಿಕೆ ಇಡುತ್ತಾರೆ. ದುಡ್ಡು ಕೊಡದಿದ್ದರೆ ರಾಜೀನಾಮೆ ಕೊಡುತ್ತೇನೆ ಎಂದು ಕೆಲವರು ಮುಖ್ಯಮಂತ್ರಿ ಅವರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.</p>.<p class="Subhead">₹ 40 ಕೋಟಿ ಆಮಿಷ: ‘ಬಿಜೆಪಿಯವರು ನನಗೆ ₹ 30 ಕೋಟಿಯಿಂದ ₹ 40 ಕೋಟಿ ಕೊಡುವ ಆಮಿಷ ಒಡ್ಡಿದ್ದರು. ಮೂರು ಸಲ ಹಣ ತಂದು ನನ್ನ ಕೊಠಡಿಯಲ್ಲಿಟ್ಟಿದ್ದರು. ಹಣ ತೆಗೆದುಕೊಂಡು ಹೋಗುತ್ತೀರೋ ಅಥವಾ ಎಸಿಬಿಗೆ ದೂರು ನೀಡಬೇಕೋ ಎಂದು ಅವರಿಗೆ ಎಚ್ಚರಿಕೆ ಕೊಟ್ಟಿದ್ದೆ’ ಎಂದಿದ್ದಾರೆ.</p>.<p>‘₹ 40 ಕೋಟಿ ತೆಗೆದುಕೊಂಡು ಪಿರಿಯಾಪಟ್ಟಣ ಕ್ಷೇತ್ರ ಹಾಗೂ ರಾಜಕೀಯವನ್ನೇ ಬಿಟ್ಟು ಎಲ್ಲಾದರೂ ನೆಮ್ಮದಿಯಿಂದ ಇರಬಹುದಿತ್ತು. ಆದರೆ ನನ್ನನ್ನು ಹಣಕ್ಕೆ ಮಾರಿಕೊಳ್ಳಬಾರದು ಎಂಬುದು ನನ್ನ ನಿರ್ಧಾರ. ನಾವು ಸತ್ತಾಗ ದೇಹಕ್ಕೆ ಮಣ್ಣು ಹಾಕಿಕೊಂಡು ಹೋಗುವುದು. ಹಣ ಹಾಕಿಕೊಂಡು ಹೋಗುವುದಿಲ್ಲ’ ಎಂದು ಹೇಳಿರುವುದು ವಿಡಿಯೊದಲ್ಲಿದೆ.</p>.<p class="Subhead"><strong>ಮಾತನಾಡಿದ್ದು ನಿಜ:</strong> ‘ಚಿಟ್ಟೇನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾನು ಆ ರೀತಿ ಹೇಳಿಕೆ ನೀಡಿದ್ದು ನಿಜ. ಹಳ್ಳಿಗಳಲ್ಲಿ ಮಾತನಾಡಿದ್ದನ್ನು ನೀವು ಅಷ್ಟು ಸೀರಿಯಸ್ಸಾಗಿ ಏಕೆ ತೆಗೆದುಕೊಳ್ಳುತ್ತೀರಿ’ ಎಂದು ಮಹದೇವ್ ಅವರು ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.</p>.<p>‘ಪಕ್ಷ ಬಿಡುವುದಾಗಿ ನಾನು ಯಾರಿಗೂ ಹೇಳಿಲ್ಲ. ಆದರೆ ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸುತ್ತಿವೆ. ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ವಿಷಯಗಳನ್ನು ಅತಿರಂಜಿತವಾಗಿ ತೋರಿಸುತ್ತಿವೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಾನು ಎಂದೂ ದ್ರೋಹ ಬಗೆಯುವುದಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ₹ 80 ಕೋಟಿ ನೀಡಿದರೆ ನಿಮ್ಮ ಜತೆ ಇರುವುದಾಗಿ ನನ್ನ ಎದುರಿಗೇ ಹೇಳಿದ್ದರು’ ಎಂದು ಪಿರಿಯಾಪಟ್ಟಣದ ಜೆಡಿಎಸ್ ಶಾಸಕ ಕೆ.ಮಹದೇವ್ ಗಂಭೀರ ಆರೋಪ ಮಾಡಿದ್ದಾರೆ.</p>.<p>ಚಿಟ್ಟೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>‘ಎಲ್ಲ ಶಾಸಕರನ್ನು ಮುಖ್ಯಮಂತ್ರಿ ಒಟ್ಟಿಗೇ ಕರೆದೊಯ್ಯಬೇಕು; ಇಲ್ಲದಿದ್ದರೆ ಹಣದ ಬೇಡಿಕೆ ಇಡುತ್ತಾರೆ. ದುಡ್ಡು ಕೊಡದಿದ್ದರೆ ರಾಜೀನಾಮೆ ಕೊಡುತ್ತೇನೆ ಎಂದು ಕೆಲವರು ಮುಖ್ಯಮಂತ್ರಿ ಅವರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.</p>.<p class="Subhead">₹ 40 ಕೋಟಿ ಆಮಿಷ: ‘ಬಿಜೆಪಿಯವರು ನನಗೆ ₹ 30 ಕೋಟಿಯಿಂದ ₹ 40 ಕೋಟಿ ಕೊಡುವ ಆಮಿಷ ಒಡ್ಡಿದ್ದರು. ಮೂರು ಸಲ ಹಣ ತಂದು ನನ್ನ ಕೊಠಡಿಯಲ್ಲಿಟ್ಟಿದ್ದರು. ಹಣ ತೆಗೆದುಕೊಂಡು ಹೋಗುತ್ತೀರೋ ಅಥವಾ ಎಸಿಬಿಗೆ ದೂರು ನೀಡಬೇಕೋ ಎಂದು ಅವರಿಗೆ ಎಚ್ಚರಿಕೆ ಕೊಟ್ಟಿದ್ದೆ’ ಎಂದಿದ್ದಾರೆ.</p>.<p>‘₹ 40 ಕೋಟಿ ತೆಗೆದುಕೊಂಡು ಪಿರಿಯಾಪಟ್ಟಣ ಕ್ಷೇತ್ರ ಹಾಗೂ ರಾಜಕೀಯವನ್ನೇ ಬಿಟ್ಟು ಎಲ್ಲಾದರೂ ನೆಮ್ಮದಿಯಿಂದ ಇರಬಹುದಿತ್ತು. ಆದರೆ ನನ್ನನ್ನು ಹಣಕ್ಕೆ ಮಾರಿಕೊಳ್ಳಬಾರದು ಎಂಬುದು ನನ್ನ ನಿರ್ಧಾರ. ನಾವು ಸತ್ತಾಗ ದೇಹಕ್ಕೆ ಮಣ್ಣು ಹಾಕಿಕೊಂಡು ಹೋಗುವುದು. ಹಣ ಹಾಕಿಕೊಂಡು ಹೋಗುವುದಿಲ್ಲ’ ಎಂದು ಹೇಳಿರುವುದು ವಿಡಿಯೊದಲ್ಲಿದೆ.</p>.<p class="Subhead"><strong>ಮಾತನಾಡಿದ್ದು ನಿಜ:</strong> ‘ಚಿಟ್ಟೇನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾನು ಆ ರೀತಿ ಹೇಳಿಕೆ ನೀಡಿದ್ದು ನಿಜ. ಹಳ್ಳಿಗಳಲ್ಲಿ ಮಾತನಾಡಿದ್ದನ್ನು ನೀವು ಅಷ್ಟು ಸೀರಿಯಸ್ಸಾಗಿ ಏಕೆ ತೆಗೆದುಕೊಳ್ಳುತ್ತೀರಿ’ ಎಂದು ಮಹದೇವ್ ಅವರು ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.</p>.<p>‘ಪಕ್ಷ ಬಿಡುವುದಾಗಿ ನಾನು ಯಾರಿಗೂ ಹೇಳಿಲ್ಲ. ಆದರೆ ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸುತ್ತಿವೆ. ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ವಿಷಯಗಳನ್ನು ಅತಿರಂಜಿತವಾಗಿ ತೋರಿಸುತ್ತಿವೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಾನು ಎಂದೂ ದ್ರೋಹ ಬಗೆಯುವುದಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>