<p><strong>ಸುಳೇಬಾವಿ (ಬೆಳಗಾವಿ ತಾ.):</strong> ‘ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಾಲಿ ಶಾಸಕರಿಗಿಂತ ನಾವು ₹10 ಕೋಟಿ ಜಾಸ್ತಿ ಖರ್ಚು ಮಾಡಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುತ್ತೇವೆ. ಅವರು ಡಬ್ಬಿ, ಮಿಕ್ಸರ್ ಸೇರಿ ₹3,000 ಖರ್ಚು ಮಾಡುತ್ತಿದ್ದಾರೆ. ₹6,000 ಕಾಣಿಕೆ ಕೊಡುವ ತಾಕತ್ತು ನಮಗೂ ಇದೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. </p>.<p>ಸುಳೇಬಾವಿ ಗ್ರಾಮದಲ್ಲಿ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಳಗದಿಂದ ಶುಕ್ರವಾರ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪಕ್ಕದ ಮೋದಗಾ ಗ್ರಾಮದಲ್ಲಿ ಮಿಕ್ಸರ್ ಕೊಡುತ್ತಿದ್ದರು ನೀವು, ಈ ಕಾರ್ಯಕ್ರಮಕ್ಕೆ ಬಂದಿದ್ದೀರಿ. ಗ್ರಾಮೀಣ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಧ್ವಜ ಹಾರಲಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ‘ಮಹಾನಾಯಕ’ ಬಂದಾಗ ಕಾಣಿಕೆ ಕೊಟ್ಟರೂ ಜನ ಸೇರಿರಲಿಲ್ಲ’ ಎಂದು ಅವರು ಡಿ.ಕೆ.ಶಿವಕುಮಾರ್ ಹೆಸರು ಹೇಳದೇ ಮೂದಲಿಸಿದರು.</p>.<p>‘ಈಗಿನ ಗ್ರಾಮೀಣ ಶಾಸಕರನ್ನು ನಾನೇ ಗೆಲ್ಲಿಸಿದ್ದೇನೆ. ಈಗ ನನಗೆ ತಿರುಗುಬಾಣವಾಗಿದೆ. ಅದು ಕೆಟ್ಟ ಹುಳ. ಅದನ್ನು ತೆಗೆದು ಹಾಕಲೇಬೇಕು. ಶಾಸಕರಾದ ಬಳಿಕ ಈ ಭಾಗದಲ್ಲಿ ಅಕ್ರಮ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಈ ಶಾಸಕರನ್ನು ಕಿತ್ತೆಸೆಯಬೇಕಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಳೇಬಾವಿ (ಬೆಳಗಾವಿ ತಾ.):</strong> ‘ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಾಲಿ ಶಾಸಕರಿಗಿಂತ ನಾವು ₹10 ಕೋಟಿ ಜಾಸ್ತಿ ಖರ್ಚು ಮಾಡಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುತ್ತೇವೆ. ಅವರು ಡಬ್ಬಿ, ಮಿಕ್ಸರ್ ಸೇರಿ ₹3,000 ಖರ್ಚು ಮಾಡುತ್ತಿದ್ದಾರೆ. ₹6,000 ಕಾಣಿಕೆ ಕೊಡುವ ತಾಕತ್ತು ನಮಗೂ ಇದೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. </p>.<p>ಸುಳೇಬಾವಿ ಗ್ರಾಮದಲ್ಲಿ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಳಗದಿಂದ ಶುಕ್ರವಾರ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪಕ್ಕದ ಮೋದಗಾ ಗ್ರಾಮದಲ್ಲಿ ಮಿಕ್ಸರ್ ಕೊಡುತ್ತಿದ್ದರು ನೀವು, ಈ ಕಾರ್ಯಕ್ರಮಕ್ಕೆ ಬಂದಿದ್ದೀರಿ. ಗ್ರಾಮೀಣ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಧ್ವಜ ಹಾರಲಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ‘ಮಹಾನಾಯಕ’ ಬಂದಾಗ ಕಾಣಿಕೆ ಕೊಟ್ಟರೂ ಜನ ಸೇರಿರಲಿಲ್ಲ’ ಎಂದು ಅವರು ಡಿ.ಕೆ.ಶಿವಕುಮಾರ್ ಹೆಸರು ಹೇಳದೇ ಮೂದಲಿಸಿದರು.</p>.<p>‘ಈಗಿನ ಗ್ರಾಮೀಣ ಶಾಸಕರನ್ನು ನಾನೇ ಗೆಲ್ಲಿಸಿದ್ದೇನೆ. ಈಗ ನನಗೆ ತಿರುಗುಬಾಣವಾಗಿದೆ. ಅದು ಕೆಟ್ಟ ಹುಳ. ಅದನ್ನು ತೆಗೆದು ಹಾಕಲೇಬೇಕು. ಶಾಸಕರಾದ ಬಳಿಕ ಈ ಭಾಗದಲ್ಲಿ ಅಕ್ರಮ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತ ಬಂದಿದ್ದಾರೆ. ಈ ಶಾಸಕರನ್ನು ಕಿತ್ತೆಸೆಯಬೇಕಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>