<p><strong>ಮೈಸೂರು</strong>: ‘ನನಗೆ ಲಭಿಸಿರುವ ಮಾಹಿತಿ ಪ್ರಕಾರ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್ ನಡೆದಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.</p>.<p>‘ಈ ಪ್ರಕರಣದ ಹಿಂದೆ ದೊಡ್ಡವರ ಕೈವಾಡವಿದೆ. ಸಂತ್ರಸ್ತೆ ಎಲ್ಲಿದ್ದಾಳೆ ಎಂಬುದನ್ನು ಹುಡುಕುವ ಬದಲು, ದೂರು ನೀಡಿದ ದಿನೇಶ್ ಕಲ್ಲಹಳ್ಳಿಯನ್ನು ಬಂಧಿಸಬೇಕು. ಇನ್ನಷ್ಟು ಸಿ.ಡಿಗಳಿವೆ ಎಂದು ಹೇಳುವ ಆತನನ್ನು ವಿಚಾರಣೆಗೆ ಒಳಪಡಿಸಿದರೆ ಇಡೀ ಪ್ರಕರಣದ ಸತ್ಯಾಂಶ ಹೊರಬರಲಿದೆ’ ಎಂದು ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮದವರಿಗೆ ತಿಳಿಸಿದರು.</p>.<p>‘ಸಿ.ಡಿ. ಮುಂದಿಟ್ಟು ಮೂರು ತಿಂಗಳ ಹಿಂದೆಯೇ ದುಡ್ಡಿನ ವ್ಯವಹಾರ ನಡೆದಿದೆ. ದಿನೇಶ್ ಒಂದು ತಂಡವನ್ನು ಕಟ್ಟಿಕೊಂಡು ದುಡ್ಡು ಮಾಡುತ್ತಿದ್ದಾನೆ. ಆತನ ಬಳಿ ಸಿ.ಡಿ ಎಲ್ಲಿಂದ ಬಂತು ಎಂಬುದರ ತನಿಖೆಯಾಗಲಿ’ ಎಂದು ಆಗ್ರಹಿಸಿದರು.</p>.<p>‘ನಾನು ಈ ಪ್ರಕರಣ ನೋಡಿ ಖುಷಿ ಪಡುವವನಲ್ಲ. ಇಂತಹ ಬೆಳವಣಿಗೆಗಳಿಂದ ಸಮಾಜದಲ್ಲಿ ಹೇಸಿಗೆ ಹುಟ್ಟಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆ ಸಚಿವನನ್ನು ರಾಜೀನಾಮೆ ಕೊಡಿಸಬೇಕೆಂಬ ಅವರ ಉದ್ದೇಶ ಈಡೇರಿದೆ. ಇಂತಹ ವಿಚಾರದಲ್ಲಿ ಸುಮ್ಮನೆ ಕಲ್ಲು ಹೊಡೆಯಬಾರದು’ ಎಂದರು.</p>.<p>‘ರಾಜಕಾರಣಿಗಳ ಸಿಡಿ ಇದೆ ಎನ್ನುವವರನ್ನು ಮೊದಲು ಒದ್ದು ಒಳಗೆ ಹಾಕಬೇಕು. ಅಂತವರನ್ನು ಬಂಧಿಸಿ ಅವರ ಬಳಿ ಇರುವ ಸಿ.ಡಿಗಳನ್ನು ಸರ್ಕಾರವೇ ಜನರ ಮುಂದೆ ಬಿಡುಗಡೆ ಮಾಡಲಿ. ಸಿ.ಡಿ ಹೆಸರಿನಲ್ಲಿ ನಡೆಯುವ ಬ್ಲ್ಯಾಕ್ಮೇಲ್ಗಳು ನಿಲ್ಲಬೇಕು ಎಂಬುದು ನನ್ನ ಉದ್ದೇಶ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ನನಗೆ ಲಭಿಸಿರುವ ಮಾಹಿತಿ ಪ್ರಕಾರ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್ ನಡೆದಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.</p>.<p>‘ಈ ಪ್ರಕರಣದ ಹಿಂದೆ ದೊಡ್ಡವರ ಕೈವಾಡವಿದೆ. ಸಂತ್ರಸ್ತೆ ಎಲ್ಲಿದ್ದಾಳೆ ಎಂಬುದನ್ನು ಹುಡುಕುವ ಬದಲು, ದೂರು ನೀಡಿದ ದಿನೇಶ್ ಕಲ್ಲಹಳ್ಳಿಯನ್ನು ಬಂಧಿಸಬೇಕು. ಇನ್ನಷ್ಟು ಸಿ.ಡಿಗಳಿವೆ ಎಂದು ಹೇಳುವ ಆತನನ್ನು ವಿಚಾರಣೆಗೆ ಒಳಪಡಿಸಿದರೆ ಇಡೀ ಪ್ರಕರಣದ ಸತ್ಯಾಂಶ ಹೊರಬರಲಿದೆ’ ಎಂದು ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮದವರಿಗೆ ತಿಳಿಸಿದರು.</p>.<p>‘ಸಿ.ಡಿ. ಮುಂದಿಟ್ಟು ಮೂರು ತಿಂಗಳ ಹಿಂದೆಯೇ ದುಡ್ಡಿನ ವ್ಯವಹಾರ ನಡೆದಿದೆ. ದಿನೇಶ್ ಒಂದು ತಂಡವನ್ನು ಕಟ್ಟಿಕೊಂಡು ದುಡ್ಡು ಮಾಡುತ್ತಿದ್ದಾನೆ. ಆತನ ಬಳಿ ಸಿ.ಡಿ ಎಲ್ಲಿಂದ ಬಂತು ಎಂಬುದರ ತನಿಖೆಯಾಗಲಿ’ ಎಂದು ಆಗ್ರಹಿಸಿದರು.</p>.<p>‘ನಾನು ಈ ಪ್ರಕರಣ ನೋಡಿ ಖುಷಿ ಪಡುವವನಲ್ಲ. ಇಂತಹ ಬೆಳವಣಿಗೆಗಳಿಂದ ಸಮಾಜದಲ್ಲಿ ಹೇಸಿಗೆ ಹುಟ್ಟಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆ ಸಚಿವನನ್ನು ರಾಜೀನಾಮೆ ಕೊಡಿಸಬೇಕೆಂಬ ಅವರ ಉದ್ದೇಶ ಈಡೇರಿದೆ. ಇಂತಹ ವಿಚಾರದಲ್ಲಿ ಸುಮ್ಮನೆ ಕಲ್ಲು ಹೊಡೆಯಬಾರದು’ ಎಂದರು.</p>.<p>‘ರಾಜಕಾರಣಿಗಳ ಸಿಡಿ ಇದೆ ಎನ್ನುವವರನ್ನು ಮೊದಲು ಒದ್ದು ಒಳಗೆ ಹಾಕಬೇಕು. ಅಂತವರನ್ನು ಬಂಧಿಸಿ ಅವರ ಬಳಿ ಇರುವ ಸಿ.ಡಿಗಳನ್ನು ಸರ್ಕಾರವೇ ಜನರ ಮುಂದೆ ಬಿಡುಗಡೆ ಮಾಡಲಿ. ಸಿ.ಡಿ ಹೆಸರಿನಲ್ಲಿ ನಡೆಯುವ ಬ್ಲ್ಯಾಕ್ಮೇಲ್ಗಳು ನಿಲ್ಲಬೇಕು ಎಂಬುದು ನನ್ನ ಉದ್ದೇಶ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>