ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿ.ಡಿ ಪ್ರಕರಣ ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿದೆ. ಇದರ ನಡುವೆ ಕಾಂಗ್ರೆಸ್–ಬಿಜೆಪಿ ಟ್ವೀಟ್ ಸಮರವೂ ಜೋರಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಶಿವಮೊಗ್ಗದಲ್ಲಿ ಹೆಗಲು ಮುಟ್ಟಿನೋಡಿಕೊಂಡದ್ದಕ್ಕೂ, ಈಗ ನಡೆಯುತ್ತಿರುವ ಘಟನೆಗಳಿಗೂ ಏನೋ ಸಂಬಂಧವಿದೆ. ನನ್ನನ್ನು ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರು. ಸಿಕ್ಕಿ ಬೀಳುವ ಮುನ್ಸೂಚನೆ ಮೊದಲೇ ಗೊತ್ತಾಗಿದ್ದು ಹೇಗೆ? ಪ್ರಕರಣದಲ್ಲಿ ನಿಮ್ಮ ಪಾಲೂ ಇದೆ ಎಂಬುದು ಸಾಬೀತು ಆದಂತಲ್ಲವೇ?’ ಎಂದು ಪ್ರಶ್ನಿಸಿದೆ.