ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬೆಂಗಳೂರು, ತೀರ್ಥಹಳ್ಳಿಯಲ್ಲಿ ಎನ್‌ಐಎ ದಾಳಿ

Published 27 ಮಾರ್ಚ್ 2024, 5:08 IST
Last Updated 27 ಮಾರ್ಚ್ 2024, 5:08 IST
ಅಕ್ಷರ ಗಾತ್ರ

ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆ ನಡೆಸುತ್ತಿರುವ ಎನ್ಐಎ ಹಾಗೂ ಸಿಸಿಬಿ ಪೊಲೀಸರ ತಂಡಗಳು, ಬೆಂಗಳೂರು ಹಾಗೂ ಶಿವಮೊಗ್ಗದ ತೀರ್ಥಹಳ್ಳಿಯ ಹಲವು ಸ್ಥಳಗಳ ಮೇಲೆ ದಾಳಿ‌ ಮಾಡಿವೆ.

ಪ್ರಕರಣ ಸಂಬಂಧ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ತನಿಖಾ‌ ಅಧಿಕಾರಿಗಳು, ಲಭ್ಯವಾದ ಮಾಹಿತಿ ಆಧರಿಸಿ ಬುಧವಾರ ನಸುಕಿನಲ್ಲೇ ಹಲವೆಡೆ ದಾಳಿ‌ ಮಾಡಿದ್ದಾರೆ.

ಐಎಸ್ ಜೊತೆ ನಂಟು ಹೊಂದಿದ್ದ ಶಂಕಿತರು, ತಮಿಳುನಾಡು ಹಾಗೂ ಕರ್ನಾಟಕದಲ್ಲಿ‌ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದರು. ಬೆಂಗಳೂರಿನ ಗುರಪ್ಪನಪಾಳ್ಯದಲ್ಲೂ ಶಂಕಿತರು ಸಭೆ ನಡೆಸಿದ್ದರು.

ಇದೇ ಗುರಪ್ಪನಪಾಳ್ಯದ ಕೆಲವರ ಮನೆಗಳ ಮೇಲೆ ಅಧಿಕಾರಗಳು ಗುರುವಾರ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿಯಲ್ಲೂ ಹಲವರ‌ ಮನೆಯಲ್ಲಿ ಶೋಧ ನಡೆಯುತ್ತಿದೆ ಎಂದು‌ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT