‘ಸರ್ಕಾರ ಐಸಿಯುನಲ್ಲಿದೆ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬುಧವಾರ ಇಲ್ಲಿ ಪ್ರತಿಕ್ರಿಯೆ ನೀಡಿದರು. ‘ಕೊರೊನಾ ಸೋಂಕಿಗೆ ವಿಶ್ವ ತಲ್ಲಣಗೊಂಡಿದೆ. ದೇಶದಲ್ಲಿ ಸಂಕಷ್ಟದ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಕೈಮೀರಿ ಪ್ರಯತ್ನಿಸುತ್ತಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಒಗ್ಗೂಡಿ ಕೆಲಸ ಮಾಡಿದರೆ ಮಾತ್ರ ಜನರ ಪ್ರಾಣ ಉಳಿಸಲು ಸಾಧ್ಯವಿದೆ’ ಎಂದರು.