ರಮ್ಯಾ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ವೇಣೂರು ಬಳಿ ಬೆಳ್ತಂಗಡಿ ಪೊಲೀಸರು ಭಾನುವಾರ ಮಧ್ಯಾಹ್ನ ವಶಕ್ಕೆ ಪಡೆದು ಉಡುಪಿ ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ. ಇದನ್ನು ದಕ್ಷಿಣ ಕನ್ನಡ ಪೊಲೀಸರು ಖಚಿತಪಡಿಸಿದ್ದಾರೆ.
ಸ್ವಾಮೀಜಿ ಸಾವಿನ ಕುರಿತು ರಮ್ಯಾ ಶೆಟ್ಟಿಯನ್ನು ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದರು. ಆದರೆ, ಅಂದಿನಿಂದಲೂ ಆಕೆ ನಾಪತ್ತೆಯಾಗಿದ್ದರು. ಮಹಿಳೆಯ ಪತ್ತೆಗಾಗಿ ಉಡುಪಿ ಪೊಲೀಸರು ನೆರೆಯ ಜಿಲ್ಲೆಗಳ ಪೊಲೀಸರ ನೆರವು ಕೋರಿದ್ದರು.