ಕಾಂಗ್ರೆಸ್ ಸರ್ಕಾರವು ಸೋಮವಾರ ವರ್ಷ ಪೂರೈಸುತ್ತಿರುವ ಪ್ರಯುಕ್ತ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಕೂಲವು 4.60 ಕೋಟಿ ಜನರನ್ನು ತಲುಪುತ್ತಿದೆ. ಬಡವರು, ರೈತರು, ಕೂಲಿ ಕಾರ್ಮಿಕರು, ಮಹಿಳೆಯರು ಸೇರಿದಂತೆ ಶ್ರಮಿಕ ವರ್ಗದ ಎಲ್ಲ ಜನರಿಗೂ ನಮ್ಮ ಸರ್ಕಾರ ಶಕ್ತಿ ತುಂಬಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜಗತ್ತಿನಲ್ಲೇ ಇತಿಹಾಸ ನಿರ್ಮಿಸಿದೆ’ ಎಂದಿದ್ದಾರೆ.