ಏನಾಗಿತ್ತು?: ನಗರದಿಂದ ಬೆಂಗಳೂರಿಗೆ ಶನಿವಾರ ಹೊರಡಬೇಕಿದ್ದ ರಾಣಿ ಚನ್ನಮ್ಮ ಎಕ್ಸ್ಪ್ರೆಸ್ ರೈಲು ಭಾನುವಾರ ಬೆಳಿಗ್ಗೆ ಹೊರಟ ಕಾರಣ, ಪರೀಕ್ಷೆ ಬರೆಯಲು ರಾಜಧಾನಿಗೆ ಹೊರಟಿದ್ದ ಸುಮಾರು 2 ಸಾವಿರ ಅಭ್ಯರ್ಥಿಗಳು ಅವಕಾಶ ಕಳೆದುಕೊಂಡಿದ್ದಾರೆ. ರೈಲು ಶನಿವಾರ ರಾತ್ರಿ 10.40ಕ್ಕೆ ಹುಬ್ಬಳ್ಳಿ ನಿಲ್ದಾಣದಿಂದ ಹೊರಡಬೇಕಿತ್ತು. ಧಾರವಾಡದ ಕಂಬಾರಗಣವಿ ಸಮೀಪ ರಾತ್ರಿ ಗೂಡ್ಸ್ ರೈಲು, ಎಂಜಿನ್ ವಿಫಲವಾಗಿ ಕೆಟ್ಟು ನಿಂತಿತ್ತು. ಹೀಗಾಗಿ, ಆಮಾರ್ಗದಲ್ಲಿ ಸಂಚರಿಸಬೇಕಾಗಿದ್ದ ರಾಣಿ ಚನ್ನಮ್ಮ ಎಕ್ಸ್ಪ್ರೆಸ್ ರೈಲು ಹುಬ್ಬಳ್ಳಿ ನಿಲ್ದಾಣ ತಲುಪಿರಲಿಲ್ಲ.