ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ತುಮಕೂರು | ಸಚಿವ ಪರಮೇಶ್ವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ED ದಾಳಿ

Published : 21 ಮೇ 2025, 6:27 IST
Last Updated : 21 ಮೇ 2025, 19:24 IST
ಫಾಲೋ ಮಾಡಿ
Comments
2019ರಲ್ಲಿ ಐ.ಟಿ ಶೋಧ
ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಸೊಸೈಟಿ ಅಧೀನದ ಸಂಸ್ಥೆಗಳ ಮೇಲೆ 2019ರ ಅಕ್ಟೋಬರ್‌ 10ರಂದು ಆದಾಯ ತೆರಿಗೆ ಅಧಿಕಾರಿಗಳು ಶೋಧ ನಡೆಸಿದ್ದರು. ಆಗ ದೊಡ್ಡ ಮೊತ್ತದ ನಗದು ವಶಕ್ಕೆ ಪಡೆಯಲಾಗಿತ್ತು. ಈ ಸಂಬಂಧವೂ ಇ.ಡಿ ತನಿಖೆ ಆರಂಭಿಸಿತ್ತು.
ಕೇಂದ್ರ ಸರ್ಕಾರವು ದೇಶದಾದ್ಯಂತ ವಿರೋಧ ಪಕ್ಷಗಳ ದಲಿತ ನಾಯಕರ ವಿರುದ್ಧ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪರಮೇಶ್ವರ ಅವರು ಒಬ್ಬ ದಲಿತ ನಾಯಕ. ಅವರ ವಿರುದ್ಧ ಕೇಂದ್ರವು ಇ.ಡಿಯನ್ನು ಬಳಸಿಕೊಳ್ಳುತ್ತಿದೆ. ಸತ್ಯವೇ ಇಲ್ಲದ ಆರೋಪಗಳಲ್ಲಿ ತನಿಖೆ ಹೆಸರಿನಲ್ಲಿ ಕಿರುಕುಳ ನೀಡಲಾಗುತ್ತಿದೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಪರಮೇಶ್ವರ ಅವರು ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆಯೇ ಇಲ್ಲ. ಅವರು ಬಹಳ ಸರಳ ಮತ್ತು ನೇರ ವ್ಯಕ್ತಿತ್ವದ ಮನುಷ್ಯ. ಶೈಕ್ಷಣಿಕ ಸಂಸ್ಥೆಗಳಲ್ಲಿ ಏನು ಸಿಗುತ್ತದೆ ಎಂದು ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೋ ನನಗೆ ಗೊತ್ತಿಲ್ಲ
– ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ
ಕೋಳಿ ಫಾರ್ಮ್‌ ಕಚೇರಿ ಮೇಲೂ ದಾಳಿ
ಕೊಪ್ಪಳ ಜಿಲ್ಲೆಯ ಕುದರಿಮೋತಿ ಸಮೀಪದಲ್ಲಿರುವ ಕೋಳಿ ಸಾಕಾಣಿಕೆ ಮತ್ತು ಮೊಟ್ಟೆ ಉತ್ಪಾದನಾ ಕಂಪನಿಯೊಂದರ ಕಚೇರಿಯಲ್ಲಿಯೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಶೋಧ ನಡೆಸಿದ್ದಾರೆ. ರಾಜ್ಯದಲ್ಲಿ ಅತ್ಯಧಿಕ ಮೊಟ್ಟೆ ಉತ್ಪಾದಿಸುವ ಕಂಪನಿಗಳಲ್ಲಿ ಇದು ಕೂಡ ಒಂದಾಗಿದೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನದಲ್ಲಿರುವ ರನ್ಯಾ ರಾವ್‌ ಅವರ ಮಲತಂದೆ, ಐಪಿಎಸ್‌ ಅಧಿಕಾರಿ ಆರ್‌. ರಾಮಚಂದ್ರರಾವ್‌ ಅವರ ಆಪ್ತರು ಈ ಕಂಪನಿಯ ಮಾಲೀಕರು ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT