<p><strong>ಬೆಂಗಳೂರು:</strong> ವಿರಳ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸಮರ್ಪಕ ಚಿಕಿತ್ಸೆ ಒದಗಿಸಲು ಕಾರ್ಪೊರೇಟ್ ಸಂಸ್ಥೆಗಳ ಸಹಯೋಗದಲ್ಲಿ ಯೋಜನೆ ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.</p>.<p>ಕೇಂದ್ರ ಆರೋಗ್ಯ ಸಚಿವಾಲಯವು ‘ವಿರಳ ರೋಗಗಳ ರಾಷ್ಟ್ರೀಯ ನೀತಿ– 2021’ರ (ತಿದ್ದುಪಡಿ) ಅಡಿ ತಲಾ ₹50 ಲಕ್ಷದವರೆಗೆ ಉಚಿತ ಚಿಕಿತ್ಸೆ ಹಾಗೂ ಔಷಧ ಒದಗಿಸುತ್ತಿದೆ. 2016ರಿಂದ ರಾಜ್ಯದಲ್ಲಿ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿಯೂ (ಐಜಿಐಸಿಎಚ್) ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಸ್ಥೆಯಲ್ಲಿ 22 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಮಕ್ಕಳಲ್ಲಿನ ವಿರಳ ಕಾಯಿಲೆಗಳ ಚಿಕಿತ್ಸೆಗಾಗಿ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ₹76 ಕೋಟಿ ಅನುದಾನ ಒದಗಿಸಲಾಗಿದೆ. ಈಗ ಹೆಚ್ಚಿನ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ತಿಳಿಸಿದೆ. </p>.<p>ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಇರಿಸಲಾಗಿರುವ ಮೂಲ ನಿಧಿಯಲ್ಲಿ ಅಲ್ಪ ಭಾಗವನ್ನು ವಿರಳ ಕಾಯಿಲೆ ಎದುರಿಸುತ್ತಿರುವ ಮಕ್ಕಳ ಚಿಕಿತ್ಸೆಗೆ ಬಳಸಬೇಕು ಎಂದು ಐಜಿಐಸಿಎಚ್ ನಿರ್ದೇಶಕ ಡಾ.ಕೆ.ಎಸ್. ಸಂಜಯ್ ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ನಿರ್ದೇಶನ ನೀಡಿದ್ದಾರೆ.</p>.<p>ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ಅಡಿ ನೆರವಾಗುವಂತೆ ಕಾರ್ಪೊರೇಟ್ ಸಂಸ್ಥೆಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮನವಿ ಮಾಡಿದೆ.</p>.<p>ವಿರಳ ಕಾಯಿಲೆ ಪೀಡಿತರ ಕುಟುಂಬಸ್ಥರು ಆರ್ಥಿಕ ನೆರವಿನ ನಿರೀಕ್ಷೆಯಲ್ಲಿ ಇರುವ ಬಗ್ಗೆ ‘ಏರುತ್ತಲೇ ಇದೆ ಚಿಕಿತ್ಸಾ ವೆಚ್ಚ’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಫೆ.26ರಂದು ವಿಶೇಷ ವರದಿ ಪ್ರಕಟವಾಗಿತ್ತು. </p>.<h2>‘ದತ್ತು ಪಡೆದು ಚಿಕಿತ್ಸಾ ವೆಚ್ಚ ಭರಿಸಿ’ </h2><p>‘ಲೈಸೋಸೋಮಲ್ ಸ್ಟೋರೇಜ್ ಎಂಬ ವಿರಳ ಕಾಯಿಲೆಯ ಚಿಕಿತ್ಸೆಗೆ ವಾರ್ಷಿಕ ಪ್ರತಿ ರೋಗಿಗೆ ₹20 ಲಕ್ಷದಿಂದ ₹40 ಲಕ್ಷದವರೆಗೆ ವೆಚ್ಚವಾಗಲಿದೆ. ರಾಜ್ಯದಲ್ಲಿ ಈ ರೀತಿಯ ಸಮಸ್ಯೆ ಎದುರಿಸುತ್ತಿರುವ ಮಕ್ಕಳ ಚಿಕಿತ್ಸೆಗೆ ವಾರ್ಷಿಕ ₹12 ಕೋಟಿಯಿಂದ ₹13 ಕೋಟಿ ಅನುದಾನ ಅವಶ್ಯಕತೆ ಇದೆ. ಈ ದುಬಾರಿ ವೆಚ್ಚದ ಚಿಕಿತ್ಸೆಗೆ ಕಾರ್ಪೊರೇಟ್ ಸಂಸ್ಥೆಗಳು ದೇಣಿಗೆ ನೀಡುವುದರ ಮೂಲಕ ಒಂದು ಮಗುವನ್ನು ದತ್ತು ಪಡೆದುಕೊಳ್ಳಲಿ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಆಶಯ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿರಳ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸಮರ್ಪಕ ಚಿಕಿತ್ಸೆ ಒದಗಿಸಲು ಕಾರ್ಪೊರೇಟ್ ಸಂಸ್ಥೆಗಳ ಸಹಯೋಗದಲ್ಲಿ ಯೋಜನೆ ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.</p>.<p>ಕೇಂದ್ರ ಆರೋಗ್ಯ ಸಚಿವಾಲಯವು ‘ವಿರಳ ರೋಗಗಳ ರಾಷ್ಟ್ರೀಯ ನೀತಿ– 2021’ರ (ತಿದ್ದುಪಡಿ) ಅಡಿ ತಲಾ ₹50 ಲಕ್ಷದವರೆಗೆ ಉಚಿತ ಚಿಕಿತ್ಸೆ ಹಾಗೂ ಔಷಧ ಒದಗಿಸುತ್ತಿದೆ. 2016ರಿಂದ ರಾಜ್ಯದಲ್ಲಿ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿಯೂ (ಐಜಿಐಸಿಎಚ್) ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಸ್ಥೆಯಲ್ಲಿ 22 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಮಕ್ಕಳಲ್ಲಿನ ವಿರಳ ಕಾಯಿಲೆಗಳ ಚಿಕಿತ್ಸೆಗಾಗಿ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ₹76 ಕೋಟಿ ಅನುದಾನ ಒದಗಿಸಲಾಗಿದೆ. ಈಗ ಹೆಚ್ಚಿನ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ತಿಳಿಸಿದೆ. </p>.<p>ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಇರಿಸಲಾಗಿರುವ ಮೂಲ ನಿಧಿಯಲ್ಲಿ ಅಲ್ಪ ಭಾಗವನ್ನು ವಿರಳ ಕಾಯಿಲೆ ಎದುರಿಸುತ್ತಿರುವ ಮಕ್ಕಳ ಚಿಕಿತ್ಸೆಗೆ ಬಳಸಬೇಕು ಎಂದು ಐಜಿಐಸಿಎಚ್ ನಿರ್ದೇಶಕ ಡಾ.ಕೆ.ಎಸ್. ಸಂಜಯ್ ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ನಿರ್ದೇಶನ ನೀಡಿದ್ದಾರೆ.</p>.<p>ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ಅಡಿ ನೆರವಾಗುವಂತೆ ಕಾರ್ಪೊರೇಟ್ ಸಂಸ್ಥೆಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮನವಿ ಮಾಡಿದೆ.</p>.<p>ವಿರಳ ಕಾಯಿಲೆ ಪೀಡಿತರ ಕುಟುಂಬಸ್ಥರು ಆರ್ಥಿಕ ನೆರವಿನ ನಿರೀಕ್ಷೆಯಲ್ಲಿ ಇರುವ ಬಗ್ಗೆ ‘ಏರುತ್ತಲೇ ಇದೆ ಚಿಕಿತ್ಸಾ ವೆಚ್ಚ’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಫೆ.26ರಂದು ವಿಶೇಷ ವರದಿ ಪ್ರಕಟವಾಗಿತ್ತು. </p>.<h2>‘ದತ್ತು ಪಡೆದು ಚಿಕಿತ್ಸಾ ವೆಚ್ಚ ಭರಿಸಿ’ </h2><p>‘ಲೈಸೋಸೋಮಲ್ ಸ್ಟೋರೇಜ್ ಎಂಬ ವಿರಳ ಕಾಯಿಲೆಯ ಚಿಕಿತ್ಸೆಗೆ ವಾರ್ಷಿಕ ಪ್ರತಿ ರೋಗಿಗೆ ₹20 ಲಕ್ಷದಿಂದ ₹40 ಲಕ್ಷದವರೆಗೆ ವೆಚ್ಚವಾಗಲಿದೆ. ರಾಜ್ಯದಲ್ಲಿ ಈ ರೀತಿಯ ಸಮಸ್ಯೆ ಎದುರಿಸುತ್ತಿರುವ ಮಕ್ಕಳ ಚಿಕಿತ್ಸೆಗೆ ವಾರ್ಷಿಕ ₹12 ಕೋಟಿಯಿಂದ ₹13 ಕೋಟಿ ಅನುದಾನ ಅವಶ್ಯಕತೆ ಇದೆ. ಈ ದುಬಾರಿ ವೆಚ್ಚದ ಚಿಕಿತ್ಸೆಗೆ ಕಾರ್ಪೊರೇಟ್ ಸಂಸ್ಥೆಗಳು ದೇಣಿಗೆ ನೀಡುವುದರ ಮೂಲಕ ಒಂದು ಮಗುವನ್ನು ದತ್ತು ಪಡೆದುಕೊಳ್ಳಲಿ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಆಶಯ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>