ಟ್ರಸ್ಟ್ನಲ್ಲಿ ನಡೆದಿದೆ ಎನ್ನಲಾದ ಹಣ ದುರ್ಬಳಕೆ ಆರೋಪದ ವಿಚಾರಣೆಗಾಗಿ ತನಿಖಾ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ನೇತೃತ್ವದಲ್ಲಿ ಈಚೆಗೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದಕ್ಕೆ ಪೂರಕವಾಗಿ ಟ್ರಸ್ಟ್ನ ಹಣಕಾಸು ಚಟುವಟಿಕೆಗಳ ಮೇಲೆ ತಕ್ಷಣದಿಂದಲೇ ನಿಗಾ ವಹಿಸಲು ಹಿರಿಯ ಐಎಎಸ್ ಅಧಿಕಾರಿ ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.